Monday, April 6, 2026
Monday, April 6, 2026

ರಾಜ್ಯದಲ್ಲಿ ಮುಂದುವರೆದ ಕೋವಿಡ್ ಆರ್ಭಟ

Date:

ರಾಜ್ಯದಲ್ಲಿ ಕೋವಿಡ್ ಸೋಂಕಿನ ಆರ್ಭಟ ಮುಂದುವರಿದಿದೆ. ಬುಧವಾರ 48,905 ಕೇಸು ಪತ್ತೆಯಾಗಿದೆ. 39 ಮಂದಿ ಮೃತಪಟ್ಟಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3.57 ಲಕ್ಷಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 8, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ 4, ಮೈಸೂರು 3, ಉತ್ತರ ಕನ್ನಡ, ಮಂಡ್ಯ, ಕಲಬುರಗಿ ಮತ್ತು ಚಿಕ್ಕಬಳ್ಳಾಪುರದಲ್ಲಿ ತಲಾ 2, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಗದಗ, ಕೊಪ್ಪಳ, ರಾಯಚೂರು, ಶಿವಮೊಗ್ಗ, ಉಡುಪಿ ಮತ್ತು ವಿಜಯಪುರದಲ್ಲಿ ತಲಾ ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ.
ಬುಧವಾರ 47,907 ಜನರಿಗೆ ಆರ್ ರಾಪಿಡ್ ಆಂಟಿಜೆನ್ ಹಾಗೂ 1,69,323 ಜನರಿಗೆ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ.
ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.22.51ರಷ್ಟಿದ್ದು, ಸಾವಿನ ಪ್ರಮಾಣ ಶೇ.0.07ರಷ್ಟಿದೆ. ಬೆಂಗಳೂರು ನಗರದಲ್ಲಿ 22,427 ಗರಿಷ್ಟ ಸೋಂಕು ಕಂಡುಬಂದಿದೆ. ಮೈಸೂರು 2,797, ತುಮಕೂರು 2,645, ಮಂಡ್ಯ 2,186, ಹಾಸನ 2,016, ಕೋಲಾರ 1,547, ಧಾರವಾಡ 1,523, ಉಡುಪಿಯಲ್ಲಿ 1,392, ಬಳ್ಳಾರಿಯಲ್ಲಿ 1,141, ಕಲಬುರಗಿ 1007 ಕೇಸುಗಳು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...