Monday, August 24, 2026
Monday, August 24, 2026

ಆರು ತಿಂಗಳ ಅವಧಿಜನತೆಯ ಅಗತ್ಯಕ್ಕೆಸದಾ ಸ್ಪಂದಿಸಿದಸರ್ಕಾರ- ಸಿಎಂ ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಶುಕ್ರವಾರ 6 ತಿಂಗಳು ತುಂಬಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ತಿಳಿಸುವ ಪುಸ್ತಕ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಜನ ಕಲ್ಯಾಣ ಮಾಡಲು ಯಾವುದೇ ಸಮಯ, ಸಂದರ್ಭದಲ್ಲಿ ಕಾಯುವ ಅಗತ್ಯವಿರುವುದಿಲ್ಲ. ನಮ್ಮದು ಸ್ಪಂದನಶೀಲ ಸರ್ಕಾರ. ಈ ಕೆಲಸ ನಿರಂತರ ನಡೆಯುತ್ತದೆ. ಸರ್ಕಾರ ಆರು ತಿಂಗಳು ಪೂರೈಸಿದ್ದರಿಂದ ಪಕ್ಷಿನೋಟ ತಿಳಿಸುವ ಪುಸ್ತಕ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಮ್ಮದು ಸೃಜನಶೀಲ ಸರ್ಕಾರ. ಅದಕ್ಕೆ 100 ದಿನ ಆರು ತಿಂಗಳು ಅಥವಾ ಯಾವುದೂ ಮುಖ್ಯವಲ್ಲ. ನಿರಂತರವಾಗಿ ಜನರ ಅಗತ್ಯಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ಜೋಳ ಖರೀದಿಗೆ ಅವಕಾಶ ಕೇಳಿದಾಗ ಅದಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗೆಯೇ ರಾಗಿ ಖರೀದಿ ಮುಂದುವರಿಸಲು ಬೇಡಿಕೆಯಿದೆ. ಅದಕ್ಕೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಕಳೆದ ವರ್ಷ ಜುಲೈ 28ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದರು. ಅದಾದ ಬಳಿಕ ಮಕ್ಕಳಿಗೆ ವಿದ್ಯಾನಿಧಿ ಸೇರಿದಂತೆ ಹಲವಾರು ಜನಪ್ರಿಯ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಈ ಅವಧಿಯಲ್ಲಿ ಆಡಳಿತದಲ್ಲಿ ಸುಧಾರಣೆ ತರುವುದೂ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...