Monday, March 16, 2026
Monday, March 16, 2026

ಆರು ತಿಂಗಳ ಅವಧಿಜನತೆಯ ಅಗತ್ಯಕ್ಕೆಸದಾ ಸ್ಪಂದಿಸಿದಸರ್ಕಾರ- ಸಿಎಂ ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಶುಕ್ರವಾರ 6 ತಿಂಗಳು ತುಂಬಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ತಿಳಿಸುವ ಪುಸ್ತಕ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.
ಜನ ಕಲ್ಯಾಣ ಮಾಡಲು ಯಾವುದೇ ಸಮಯ, ಸಂದರ್ಭದಲ್ಲಿ ಕಾಯುವ ಅಗತ್ಯವಿರುವುದಿಲ್ಲ. ನಮ್ಮದು ಸ್ಪಂದನಶೀಲ ಸರ್ಕಾರ. ಈ ಕೆಲಸ ನಿರಂತರ ನಡೆಯುತ್ತದೆ. ಸರ್ಕಾರ ಆರು ತಿಂಗಳು ಪೂರೈಸಿದ್ದರಿಂದ ಪಕ್ಷಿನೋಟ ತಿಳಿಸುವ ಪುಸ್ತಕ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಮ್ಮದು ಸೃಜನಶೀಲ ಸರ್ಕಾರ. ಅದಕ್ಕೆ 100 ದಿನ ಆರು ತಿಂಗಳು ಅಥವಾ ಯಾವುದೂ ಮುಖ್ಯವಲ್ಲ. ನಿರಂತರವಾಗಿ ಜನರ ಅಗತ್ಯಗಳಿಗೆ ಸ್ಪಂದಿಸುವ ಕೆಲಸ ಮಾಡಲಾಗುತ್ತಿದೆ. ಜೋಳ ಖರೀದಿಗೆ ಅವಕಾಶ ಕೇಳಿದಾಗ ಅದಕ್ಕೆ ಅನುವು ಮಾಡಿಕೊಡಲಾಗಿದೆ. ಹಾಗೆಯೇ ರಾಗಿ ಖರೀದಿ ಮುಂದುವರಿಸಲು ಬೇಡಿಕೆಯಿದೆ. ಅದಕ್ಕೆ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.
ಕಳೆದ ವರ್ಷ ಜುಲೈ 28ರಂದು ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ್ದರು. ಅದಾದ ಬಳಿಕ ಮಕ್ಕಳಿಗೆ ವಿದ್ಯಾನಿಧಿ ಸೇರಿದಂತೆ ಹಲವಾರು ಜನಪ್ರಿಯ ಕಾರ್ಯಕ್ರಮ ಜಾರಿಗೊಳಿಸಿದ್ದಾರೆ. ಈ ಅವಧಿಯಲ್ಲಿ ಆಡಳಿತದಲ್ಲಿ ಸುಧಾರಣೆ ತರುವುದೂ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ನೀಲನಕ್ಷೆ ರೂಪಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕೇಂದ್ರ ಗೃಹ ವ್ಯವಹಾರಗಳ ಸಂಸದೀಯ ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಭಾಗಿ

B.Y. Raghavendra ನವದೆಹಲಿಯಲ್ಲಿ ನಡೆದ ಕೇಂದ್ರ ಗೃಹ ಇಲಾಖೆಗೆ ಸಂಬಂಧಿಸಿದ ಗೃಹ...

Klive Special Article ಯುಗಾದಿ…ಒಂದಿಷ್ಟು ಮಾಹಿತಿ- ಡಾ.ಹೆಚ್.ಪದ್ಮನಾಭ ಅಡಿಗ. ಶಿವಮೊಗ್ಗ

Klive Special Article ಬ್ರಹ್ಮನ ಸೃಷ್ಟಿಯ ಪ್ರಾರಂಭದದಿನ, ಬ್ರಹ್ಮನ ಪೂಜೆಯೇ ವಿಶೇಷ.ಈ...