Sunday, February 15, 2026
Sunday, February 15, 2026

ಶಾಲಾ ಚಟುವಟಿಕೆ:ಶೀಘ್ರ ಕೇಂದ್ರದಿಂದಮಾರ್ಗಸೂಚಿ

Date:

ಕೊರೋನಾ ಸಾಂಕ್ರಾಮಿಕ ದಿಂದಾಗಿ ಕಳೆದ ಎರಡು ವರ್ಷಗಳಿಂದ ದೇಶದಾದ್ಯಂತ ಸರಿಯಾಗಿ ನಡೆದ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಹೊಸ ಪಠ್ಯಕ್ರಮ, ಕಲಿಕಾ ಅವಧಿ, ಬೋಧನಾ ಸೂತ್ರ ದೊಂದಿಗೆ ಎಲ್ಲಾ ರಾಜ್ಯಗಳಲ್ಲಿ ಶಾಲೆಗಳನ್ನು ತೆರೆಯಲು ಕೇಂದ್ರ ಸರ್ಕಾರವು ಮಾರ್ಗಸೂಚಿಯನ್ನು ಶೀಘ್ರವೇ ಪ್ರಕಟಿಸಲಿದೆ.

ಆನ್ ಲೈನ್ ಕ್ಲಾಸ್ ಗಳಲ್ಲೇ ಮಗ್ನರಾಗಿರುವ ವಿದ್ಯಾರ್ಥಿಗಳನ್ನು ಮುಂಚಿನಂತೆ ಶಾಲಾ ವಾತಾವರಣಕ್ಕೆ ಒಗ್ಗಿಸಲು ಅಗತ್ಯವಾದ ಪಠ್ಯಕ್ರಮ ಮಾದರಿಯೊಂದನ್ನು ಜಾರಿಗೆ ತರುವ ಮೂಲಕ ಹಂತಹಂತವಾಗಿ ಶಾಲೆಗಳನ್ನು ಪೂರ್ಣರೂಪದಲ್ಲಿ ತೆರೆಯಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ತಜ್ಞರು, ತಜ್ಞ ವೈದ್ಯರು, ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳ ಮಟ್ಟದಲ್ಲಿ ಈಗಾಗಲೇ ಮಹತ್ವದ ಸಭೆ ನಡೆದಿದೆ. ಮಾರ್ಗಸೂಚಿಯನ್ನು ಸಿದ್ಧಪಡಿಸುವಲ್ಲಿ ಶಿಕ್ಷಣತಜ್ಞರು ನಿರತರಾಗಿದ್ದಾರೆ. ಓಮಿಕ್ರಾನ್ ತೀವ್ರ ಪ್ರಸರಣವನ್ನು ಗಮನದಲ್ಲಿರಿಸಿಕೊಂಡು ಮತ್ತು ಮುಂದಿನ ದಿನಗಳಲ್ಲಿ 10 ರಿಂದ 15 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುವ ಸಾಧ್ಯತೆಯನ್ನು ಕೂಡ ಪರಿಗಣಿಸಿ ಹೊಸ ಶಿಕ್ಷಣ ಮಾರ್ಗಸೂಚಿಯು ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಖ್ಯಾತ ವೈರಾಣು ತಜ್ಞ ಚಂದ್ರಕಾಂತ್ ಲಹರಿಯಾ, ಸಾರ್ವಜನಿಕ ನೀತಿ ತಜ್ಞಿ ಯಾಮಿನಿ ಅಯ್ಯರ್ ಸೇರಿದಂತೆ ಅನೇಕ ಗಣ್ಯರು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಭೇಟಿ ಮಾಡಿ, ಶಾಲೆಗಳನ್ನು ಹಂತ ಹಂತವಾಗಿ ತೆರೆಯುವ ಸಂಬಂಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದರು.

ಮಹಾರಾಷ್ಟ್ರ ದಲ್ಲಿ ಎಲ್ಲಾ ತರಗತಿಗಳಿಗೆ ಶಾಲೆಗಳನ್ನು ತೆರೆಯಲಾಗಿದೆ. ಫೆಬ್ರವರಿ 1 ರಿಂದ ತಮಿಳುನಾಡಿನಲ್ಲಿ ಕೂಡ ಎಲ್ಲ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಬೌದ್ಧಿಕ ತರಗತಿಗಳು ಆರಂಭಿಸಲಾಗುತ್ತಿದೆ. ಜೊತೆಗೆ ಫೆಬ್ರವರಿ 1 ರಿಂದ ಹರಿಯಾಣದಲ್ಲಿ 10ರಿಂದ 12ನೇ ತರಗತಿಯವರೆಗೆ ಆಫ್ಲೈನ್ ತರಗತಿಗಳನ್ನು ಆರಂಭಿಸಲಾಗುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು- ಡಿ.ಎಸ್.ಅರುಣ್

Chamber Of Commerce Shivamogga ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ...

Shakti scheme ಇನ್ನುಮುಂದೆ ಫ್ರೀ ಬಸ್ ಪ್ರಯಾಣಕ್ಕೆ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್

Shakti scheme ʼಶಕ್ತಿʼ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುವ...

Krishna Bhairegowda ಸದ್ದಿಲ್ಲದೇ ನಡೆದ ಕ್ರಾಂತಿ: ರಾಜ್ಯ ಸರ್ಕಾರದ ಭೂ ಗ್ಯಾರಂಟಿ- ಸಚಿವ ಕೃಷ್ಣ ಭೈರೇಗೌಡ

Krishna Bhairegowda ದಾಖಲೆ ರಹಿತ ಜನವಸತಿಗಳಿಗೆ ಕಂದಾಯ ಗ್ರಾಮದ ಭಾಗ್ಯ ಇದು...