Sunday, December 14, 2025
Sunday, December 14, 2025

ಶಾಲಾ ಚಟುವಟಿಕೆ:ಶೀಘ್ರ ಕೇಂದ್ರದಿಂದಮಾರ್ಗಸೂಚಿ

Date:

ಕೊರೋನಾ ಸಾಂಕ್ರಾಮಿಕ ದಿಂದಾಗಿ ಕಳೆದ ಎರಡು ವರ್ಷಗಳಿಂದ ದೇಶದಾದ್ಯಂತ ಸರಿಯಾಗಿ ನಡೆದ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಹೊಸ ಪಠ್ಯಕ್ರಮ, ಕಲಿಕಾ ಅವಧಿ, ಬೋಧನಾ ಸೂತ್ರ ದೊಂದಿಗೆ ಎಲ್ಲಾ ರಾಜ್ಯಗಳಲ್ಲಿ ಶಾಲೆಗಳನ್ನು ತೆರೆಯಲು ಕೇಂದ್ರ ಸರ್ಕಾರವು ಮಾರ್ಗಸೂಚಿಯನ್ನು ಶೀಘ್ರವೇ ಪ್ರಕಟಿಸಲಿದೆ.

ಆನ್ ಲೈನ್ ಕ್ಲಾಸ್ ಗಳಲ್ಲೇ ಮಗ್ನರಾಗಿರುವ ವಿದ್ಯಾರ್ಥಿಗಳನ್ನು ಮುಂಚಿನಂತೆ ಶಾಲಾ ವಾತಾವರಣಕ್ಕೆ ಒಗ್ಗಿಸಲು ಅಗತ್ಯವಾದ ಪಠ್ಯಕ್ರಮ ಮಾದರಿಯೊಂದನ್ನು ಜಾರಿಗೆ ತರುವ ಮೂಲಕ ಹಂತಹಂತವಾಗಿ ಶಾಲೆಗಳನ್ನು ಪೂರ್ಣರೂಪದಲ್ಲಿ ತೆರೆಯಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ತಜ್ಞರು, ತಜ್ಞ ವೈದ್ಯರು, ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳ ಮಟ್ಟದಲ್ಲಿ ಈಗಾಗಲೇ ಮಹತ್ವದ ಸಭೆ ನಡೆದಿದೆ. ಮಾರ್ಗಸೂಚಿಯನ್ನು ಸಿದ್ಧಪಡಿಸುವಲ್ಲಿ ಶಿಕ್ಷಣತಜ್ಞರು ನಿರತರಾಗಿದ್ದಾರೆ. ಓಮಿಕ್ರಾನ್ ತೀವ್ರ ಪ್ರಸರಣವನ್ನು ಗಮನದಲ್ಲಿರಿಸಿಕೊಂಡು ಮತ್ತು ಮುಂದಿನ ದಿನಗಳಲ್ಲಿ 10 ರಿಂದ 15 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುವ ಸಾಧ್ಯತೆಯನ್ನು ಕೂಡ ಪರಿಗಣಿಸಿ ಹೊಸ ಶಿಕ್ಷಣ ಮಾರ್ಗಸೂಚಿಯು ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಖ್ಯಾತ ವೈರಾಣು ತಜ್ಞ ಚಂದ್ರಕಾಂತ್ ಲಹರಿಯಾ, ಸಾರ್ವಜನಿಕ ನೀತಿ ತಜ್ಞಿ ಯಾಮಿನಿ ಅಯ್ಯರ್ ಸೇರಿದಂತೆ ಅನೇಕ ಗಣ್ಯರು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಭೇಟಿ ಮಾಡಿ, ಶಾಲೆಗಳನ್ನು ಹಂತ ಹಂತವಾಗಿ ತೆರೆಯುವ ಸಂಬಂಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದರು.

ಮಹಾರಾಷ್ಟ್ರ ದಲ್ಲಿ ಎಲ್ಲಾ ತರಗತಿಗಳಿಗೆ ಶಾಲೆಗಳನ್ನು ತೆರೆಯಲಾಗಿದೆ. ಫೆಬ್ರವರಿ 1 ರಿಂದ ತಮಿಳುನಾಡಿನಲ್ಲಿ ಕೂಡ ಎಲ್ಲ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಬೌದ್ಧಿಕ ತರಗತಿಗಳು ಆರಂಭಿಸಲಾಗುತ್ತಿದೆ. ಜೊತೆಗೆ ಫೆಬ್ರವರಿ 1 ರಿಂದ ಹರಿಯಾಣದಲ್ಲಿ 10ರಿಂದ 12ನೇ ತರಗತಿಯವರೆಗೆ ಆಫ್ಲೈನ್ ತರಗತಿಗಳನ್ನು ಆರಂಭಿಸಲಾಗುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...