Monday, August 24, 2026
Monday, August 24, 2026

ಶಾಲಾ ಚಟುವಟಿಕೆ:ಶೀಘ್ರ ಕೇಂದ್ರದಿಂದಮಾರ್ಗಸೂಚಿ

Date:

ಕೊರೋನಾ ಸಾಂಕ್ರಾಮಿಕ ದಿಂದಾಗಿ ಕಳೆದ ಎರಡು ವರ್ಷಗಳಿಂದ ದೇಶದಾದ್ಯಂತ ಸರಿಯಾಗಿ ನಡೆದ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಹೊಸ ಪಠ್ಯಕ್ರಮ, ಕಲಿಕಾ ಅವಧಿ, ಬೋಧನಾ ಸೂತ್ರ ದೊಂದಿಗೆ ಎಲ್ಲಾ ರಾಜ್ಯಗಳಲ್ಲಿ ಶಾಲೆಗಳನ್ನು ತೆರೆಯಲು ಕೇಂದ್ರ ಸರ್ಕಾರವು ಮಾರ್ಗಸೂಚಿಯನ್ನು ಶೀಘ್ರವೇ ಪ್ರಕಟಿಸಲಿದೆ.

ಆನ್ ಲೈನ್ ಕ್ಲಾಸ್ ಗಳಲ್ಲೇ ಮಗ್ನರಾಗಿರುವ ವಿದ್ಯಾರ್ಥಿಗಳನ್ನು ಮುಂಚಿನಂತೆ ಶಾಲಾ ವಾತಾವರಣಕ್ಕೆ ಒಗ್ಗಿಸಲು ಅಗತ್ಯವಾದ ಪಠ್ಯಕ್ರಮ ಮಾದರಿಯೊಂದನ್ನು ಜಾರಿಗೆ ತರುವ ಮೂಲಕ ಹಂತಹಂತವಾಗಿ ಶಾಲೆಗಳನ್ನು ಪೂರ್ಣರೂಪದಲ್ಲಿ ತೆರೆಯಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಬಗ್ಗೆ ಶಿಕ್ಷಣ ತಜ್ಞರು, ತಜ್ಞ ವೈದ್ಯರು, ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳ ಮಟ್ಟದಲ್ಲಿ ಈಗಾಗಲೇ ಮಹತ್ವದ ಸಭೆ ನಡೆದಿದೆ. ಮಾರ್ಗಸೂಚಿಯನ್ನು ಸಿದ್ಧಪಡಿಸುವಲ್ಲಿ ಶಿಕ್ಷಣತಜ್ಞರು ನಿರತರಾಗಿದ್ದಾರೆ. ಓಮಿಕ್ರಾನ್ ತೀವ್ರ ಪ್ರಸರಣವನ್ನು ಗಮನದಲ್ಲಿರಿಸಿಕೊಂಡು ಮತ್ತು ಮುಂದಿನ ದಿನಗಳಲ್ಲಿ 10 ರಿಂದ 15 ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಆರಂಭವಾಗುವ ಸಾಧ್ಯತೆಯನ್ನು ಕೂಡ ಪರಿಗಣಿಸಿ ಹೊಸ ಶಿಕ್ಷಣ ಮಾರ್ಗಸೂಚಿಯು ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಖ್ಯಾತ ವೈರಾಣು ತಜ್ಞ ಚಂದ್ರಕಾಂತ್ ಲಹರಿಯಾ, ಸಾರ್ವಜನಿಕ ನೀತಿ ತಜ್ಞಿ ಯಾಮಿನಿ ಅಯ್ಯರ್ ಸೇರಿದಂತೆ ಅನೇಕ ಗಣ್ಯರು ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಭೇಟಿ ಮಾಡಿ, ಶಾಲೆಗಳನ್ನು ಹಂತ ಹಂತವಾಗಿ ತೆರೆಯುವ ಸಂಬಂಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದರು.

ಮಹಾರಾಷ್ಟ್ರ ದಲ್ಲಿ ಎಲ್ಲಾ ತರಗತಿಗಳಿಗೆ ಶಾಲೆಗಳನ್ನು ತೆರೆಯಲಾಗಿದೆ. ಫೆಬ್ರವರಿ 1 ರಿಂದ ತಮಿಳುನಾಡಿನಲ್ಲಿ ಕೂಡ ಎಲ್ಲ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಬೌದ್ಧಿಕ ತರಗತಿಗಳು ಆರಂಭಿಸಲಾಗುತ್ತಿದೆ. ಜೊತೆಗೆ ಫೆಬ್ರವರಿ 1 ರಿಂದ ಹರಿಯಾಣದಲ್ಲಿ 10ರಿಂದ 12ನೇ ತರಗತಿಯವರೆಗೆ ಆಫ್ಲೈನ್ ತರಗತಿಗಳನ್ನು ಆರಂಭಿಸಲಾಗುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...