Monday, December 15, 2025
Monday, December 15, 2025

ಭಾರತ ಆರ್ಥಿಕ ಪ್ರಗತಿಯ ಹಾದಿಯಲ್ಲಿದೆ

Date:

ಭಾರತದ ಆರ್ಥಿಕತೆ ಬೆಳವಣಿಗೆಯ ಹಾದಿಯಲ್ಲಿದೆ ಎಂದು ವೇದಾಂತ ಸಮೂಹದ ಅಧ್ಯಕ್ಷ ಅನಿಲ್ ಅಗರ್ವಾಲ್ ತಿಳಿಸಿದ್ದಾರೆ.
2300 ವರ್ಷಗಳ ಹಿಂದೆ ಚಾಣಕ್ಯ ಆರ್ಥಿಕ ಪ್ರಗತಿಯು ದೇಶಕ್ಕೆ ಅಭ್ಯುದಯ ತರುತ್ತದೆ ಎಂದಿದ್ದ. ಇವತ್ತು ಭಾರತ ಸಂಶೋಧನೆ ಮತ್ತು ಡಿಜಿಟಲೀಕರಣದ ಬಲದಿಂದ ಅಭಿವೃದ್ಧಿಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ಸಂಶೋಧನೆ ಮತ್ತು ಡಿಜಿಟಲೀಕರಣ ಮತ್ತು ಸರ್ಕಾರದ ಸುಧಾರಣೆ ಕ್ರಮಗಳ ಪರಿಣಾಮದ ಬೆಳವಣಿಗೆಗೆ ಪೂರಕ ಸಂಪನ್ಮೂಲ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ಹಾಲಿ ಉತ್ಪಾದಕ ವಲಯದ ಕಂಪನಿಗಳು ಹಾಗೂ ಸರ್ಕಾರಿ ಕಂಪನಿಗಳು ಪೂರ್ಣಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಇದರಿಂದ ಒಟ್ಟಾರೆ ಉತ್ಪಾದನೆಯನ್ನು 2-3 ಪಟ್ಟು ವೃದ್ದಿಸಬಹುದು. ಇದು ಉದ್ಯೋಗವಕಾಶ ಹೆಚ್ಚಿಸಬಲ್ಲದು ಎಂದರು.
ಇಡೀ ಜಗತ್ತು ಭಾರತಕ್ಕೆ ಭೇಟಿನೀಡಲು ಬಯಸುತ್ತಿದೆ. ಹೀಗಾಗಿ ಪ್ರವಾಸೋದ್ಯಮ ಹತ್ತುಪಟ್ಟು ಬೆಳೆಯುವ ನಿರೀಕ್ಷೆ ಇದೆ. ದೇಶಕ್ಕೆ 10,000 ವರ್ಷಗಳ ಇತಿಹಾಸ ಇದೆ ಎಂದು ಅವರು ಹೇಳಿದರು. ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ವಲಯಕ್ಕೆ ಉತ್ತೇಜನ ನೀಡಬೇಕು. ಸಂಸ್ಕೃತಿ, ಕಲೆ ಮತ್ತು ಕರಕುಶಲ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...