Saturday, October 5, 2024
Saturday, October 5, 2024

ಭಾರತ ಆರ್ಥಿಕ ಪ್ರಗತಿಯ ಹಾದಿಯಲ್ಲಿದೆ

Date:

ಭಾರತದ ಆರ್ಥಿಕತೆ ಬೆಳವಣಿಗೆಯ ಹಾದಿಯಲ್ಲಿದೆ ಎಂದು ವೇದಾಂತ ಸಮೂಹದ ಅಧ್ಯಕ್ಷ ಅನಿಲ್ ಅಗರ್ವಾಲ್ ತಿಳಿಸಿದ್ದಾರೆ.
2300 ವರ್ಷಗಳ ಹಿಂದೆ ಚಾಣಕ್ಯ ಆರ್ಥಿಕ ಪ್ರಗತಿಯು ದೇಶಕ್ಕೆ ಅಭ್ಯುದಯ ತರುತ್ತದೆ ಎಂದಿದ್ದ. ಇವತ್ತು ಭಾರತ ಸಂಶೋಧನೆ ಮತ್ತು ಡಿಜಿಟಲೀಕರಣದ ಬಲದಿಂದ ಅಭಿವೃದ್ಧಿಪಥದಲ್ಲಿ ಮುನ್ನಡೆಯುತ್ತಿದೆ ಎಂದರು.
ಸಂಶೋಧನೆ ಮತ್ತು ಡಿಜಿಟಲೀಕರಣ ಮತ್ತು ಸರ್ಕಾರದ ಸುಧಾರಣೆ ಕ್ರಮಗಳ ಪರಿಣಾಮದ ಬೆಳವಣಿಗೆಗೆ ಪೂರಕ ಸಂಪನ್ಮೂಲ ಸೃಷ್ಟಿಯಾಗಿದೆ ಎಂದು ತಿಳಿಸಿದ್ದಾರೆ.
ಹಾಲಿ ಉತ್ಪಾದಕ ವಲಯದ ಕಂಪನಿಗಳು ಹಾಗೂ ಸರ್ಕಾರಿ ಕಂಪನಿಗಳು ಪೂರ್ಣಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಇದರಿಂದ ಒಟ್ಟಾರೆ ಉತ್ಪಾದನೆಯನ್ನು 2-3 ಪಟ್ಟು ವೃದ್ದಿಸಬಹುದು. ಇದು ಉದ್ಯೋಗವಕಾಶ ಹೆಚ್ಚಿಸಬಲ್ಲದು ಎಂದರು.
ಇಡೀ ಜಗತ್ತು ಭಾರತಕ್ಕೆ ಭೇಟಿನೀಡಲು ಬಯಸುತ್ತಿದೆ. ಹೀಗಾಗಿ ಪ್ರವಾಸೋದ್ಯಮ ಹತ್ತುಪಟ್ಟು ಬೆಳೆಯುವ ನಿರೀಕ್ಷೆ ಇದೆ. ದೇಶಕ್ಕೆ 10,000 ವರ್ಷಗಳ ಇತಿಹಾಸ ಇದೆ ಎಂದು ಅವರು ಹೇಳಿದರು. ಮೂಲಸೌಕರ್ಯ ಮತ್ತು ರಿಯಲ್ ಎಸ್ಟೇಟ್ ವಲಯಕ್ಕೆ ಉತ್ತೇಜನ ನೀಡಬೇಕು. ಸಂಸ್ಕೃತಿ, ಕಲೆ ಮತ್ತು ಕರಕುಶಲ ಕ್ಷೇತ್ರಗಳಿಗೂ ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...