Monday, August 24, 2026
Monday, August 24, 2026

ಜಿಲ್ಲಾ ಸರ್ಜನ್ ಗಳಿಗೆ ಅಂಗಾಂಗ ಕಸಿ ತಂತ್ರಜ್ಞಾನ ತರಬೇತಿ- ಡಾ.ಸುಧಾಕರ್

Date:


ದೇಶದಲ್ಲಿ ಸುಮಾರು 2 ಲಕ್ಷ ಅಂಗಾಂಗ ಕಸಿಗೆ ಬೇಡಿಕೆಯಿದೆ. ಹಾಗಾಗಿ ರಕ್ತದಾನ ಮಾಡುವಂತೆಯೇ ಸತ್ತ ನಂತರ ಅಂಗಾಂಗ ದಾನ ಮಾಡುವುದು ಅಗತ್ಯ. ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಬೇಕಿದೆ ಎಂದರು.
ಕೇಂದ್ರ ಆರೋಗ್ಯ ಸಚಿವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಕೋವಿಡ್ ನಿರ್ವಹಣೆ ಕುರಿತು ಮಾಹಿತಿ ಪಡೆದಿದ್ದಾರೆ.
ಸ್ಪರ್ಶ್ ಆಸ್ಪತ್ರೆಯಲ್ಲಿ ಅಂಗಾಂಗ ಕಸಿ ಆಸ್ಪತ್ರೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನೆ ಐಸೋಲೇಶನ್ ನಲ್ಲಿರುವವರ ಮೇಲೆ ಹೆಚ್ಚು ನಿಗಾ, ಇ- ಸಂಜೀವಿನಿಯಲ್ಲಿ ಎರಡನೇ ಸ್ಥಾನದಲ್ಲಿರುವುದು, ಅದಕ್ಕೂ ಹೆಚ್ಚಾಗಿ ಆಪ್ತಮಿತ್ರ ಮೂಲಕ ಟೆಲಿ ಟ್ರಯಾಜಿಂಗ್ ಮೊದಲಾದ ಮಾಹಿತಿ ಪಡೆದಿದ್ದಾರೆ. ಬಹಳ ಯಶಸ್ವಿಯಾಗಿ ದೂರವಾಣಿ ಮೂಲಕ ನಿರ್ವಹಣೆ ಮಾಡುತ್ತಿರುವುದು ವಿಶೇಷವಾಗಿದೆ. ಶೇ.95ರಷ್ಟು ಸೋಂಕಿತರು ಮನೆಯಲ್ಲಿದ್ದರೂ ಆತಂಕವಿಲ್ಲ. ಶೇ.4ರಷ್ಟು ಜನರು ಮಾತ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.
ರಾಜ್ಯದಲ್ಲಿ ಮರಣ ಪ್ರಮಾಣ ಶೇ.0.005ರಷ್ಟಿದೆ. ಇದು ಅಧಿಕವಾಗಿಲ್ಲ. ಸಹ ಅಸ್ವಸ್ಥತೆ ಸೇರಿದಂತೆ ಸಾವಿಗೆ ಹಲವು ಕಾರಣಗಳಿವೆ. ಇದಕ್ಕಾಗಿ ಡೆತ್ ಆಡಿಟ್ ನಡೆಸಲಾಗುತ್ತಿದೆ. ಆರೋಗ್ಯ ಕ್ಷೇತ್ರದ ವಿಷನ್ ವರದಿಯನ್ನು ಮುಖ್ಯಮಂತ್ರಿಗಳೇ ಬಿಡುಗಡೆ ಮಾಡಲಿದ್ದಾರೆ. ದೂರದೃಷ್ಟಿಯನ್ನೊಳಗೊಂಡ ವಿಷನ್ ವರದಿ ಇದಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ಈ ರೀತಿ ವರದಿ ತಯಾರಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...