Monday, December 8, 2025
Monday, December 8, 2025

ಗೋಶಾಲೆ ಪ್ರತಿ ಗ್ರಾಮದಲ್ಲೂ ಆರಂಭಿಸಿ:ಸರ್ಕಾರಕ್ಕೆ ಹೈಕೋರ್ಟ್ ಸಲಹೆ

Date:

ಪ್ರತಿ ಗ್ರಾಮದಲ್ಲೂ ಗೋ ಶಾಲೆ ಆರಂಭಿಸುವ ಅಗತ್ಯವಿದೆ. ನೀವು ಇತರ ರಾಜ್ಯಗಳನ್ನು ನೋಡಿ ತಿಳಿಯಿರಿ ಎಂದು ಹೈಕೋರ್ಟ್ ಮೌಖಿಕ ಸಲಹೆ ನೀಡಿದೆ.
ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ನಿರ್ದೇಶಿಸಬೇಕೆಂದು ಸಲ್ಲಿಸಿರುವ ಪಿಐಎಲ್ ಸಿಜೆ ರಿತುರಾಜ್ ಪೀಠ ವಿಚಾರಣೆ ನಡೆಸಿತು.
ಅಲ್ಲದೆ, ಪ್ರತಿ ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ಮಾತ್ರ ಗೋಶಾಲೆ ಆರಂಭಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.
ಈ ನಡುವೆ, ರಾಜ್ಯದ ಆಯ್ದ ತಾಲೂಕುಗಳಲ್ಲಿ 97 ಗೋಶಾಲೆ ತೆರೆಯಲಾಗಿದೆ. ಅವುಗಳಿಗೆ ಅನುದಾನ ಸಹ ನೀಡಲಾಗಿದೆ. ಹಾಗಾಗಿ, ಮತ್ತೆ ತಾಲೂಕು ಮಟ್ಟದ ಬದಲಾಗಿ ತಾತ್ಕಾಲಿಕವಾಗಿ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಲು ಸರ್ಕಾರ ಆದೇಶಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿದರೆ ಸಾಕಾಗುವುದಿಲ್ಲ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲದೆ ಪ್ರತಿ ಗ್ರಾಮ ಮಟ್ಟದಲ್ಲೂ ಗೋಶಾಲೆ ತೆರೆಯಬೇಕು. ಬೇರೆ ರಾಜ್ಯಗಳಿಗೆ ಹೋಗಿ ಪರಿಶೀಲನೆ ಮಾಡಿ. ಅಲ್ಲಿನ ಸರ್ಕಾರಗಳು ಪ್ರತಿಯೊಂದು ಗ್ರಾಮದಲ್ಲಿ ಗೋಶಾಲೆ ಆರಂಭಿಸಿವೆ ಎಂದು ಸಿಜೆ ತಾಕೀತು ಮಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...