Wednesday, July 8, 2026
Wednesday, July 8, 2026

ಗೋಶಾಲೆ ಪ್ರತಿ ಗ್ರಾಮದಲ್ಲೂ ಆರಂಭಿಸಿ:ಸರ್ಕಾರಕ್ಕೆ ಹೈಕೋರ್ಟ್ ಸಲಹೆ

Date:

ಪ್ರತಿ ಗ್ರಾಮದಲ್ಲೂ ಗೋ ಶಾಲೆ ಆರಂಭಿಸುವ ಅಗತ್ಯವಿದೆ. ನೀವು ಇತರ ರಾಜ್ಯಗಳನ್ನು ನೋಡಿ ತಿಳಿಯಿರಿ ಎಂದು ಹೈಕೋರ್ಟ್ ಮೌಖಿಕ ಸಲಹೆ ನೀಡಿದೆ.
ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರ ಪ್ರತಿ ತಾಲೂಕಿನಲ್ಲಿ ಗೋಶಾಲೆ ಆರಂಭಿಸಬೇಕು ಹಾಗೂ ಗೋಶಾಲೆಗಳಿಗೆ ಸೂಕ್ತ ಪ್ರಮಾಣದಲ್ಲಿ ಮೇವು, ನೀರು ಮತ್ತು ಜಾಗ ಒದಗಿಸಲು ನಿರ್ದೇಶಿಸಬೇಕೆಂದು ಸಲ್ಲಿಸಿರುವ ಪಿಐಎಲ್ ಸಿಜೆ ರಿತುರಾಜ್ ಪೀಠ ವಿಚಾರಣೆ ನಡೆಸಿತು.
ಅಲ್ಲದೆ, ಪ್ರತಿ ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ಮಾತ್ರ ಗೋಶಾಲೆ ಆರಂಭಿಸಲು ಸರ್ಕಾರ ಕೈಗೊಂಡಿರುವ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದೆ.
ಈ ನಡುವೆ, ರಾಜ್ಯದ ಆಯ್ದ ತಾಲೂಕುಗಳಲ್ಲಿ 97 ಗೋಶಾಲೆ ತೆರೆಯಲಾಗಿದೆ. ಅವುಗಳಿಗೆ ಅನುದಾನ ಸಹ ನೀಡಲಾಗಿದೆ. ಹಾಗಾಗಿ, ಮತ್ತೆ ತಾಲೂಕು ಮಟ್ಟದ ಬದಲಾಗಿ ತಾತ್ಕಾಲಿಕವಾಗಿ ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿಸಲು ಸರ್ಕಾರ ಆದೇಶಿಸಿದೆ ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಗೋಶಾಲೆ ಆರಂಭಿದರೆ ಸಾಕಾಗುವುದಿಲ್ಲ. ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲದೆ ಪ್ರತಿ ಗ್ರಾಮ ಮಟ್ಟದಲ್ಲೂ ಗೋಶಾಲೆ ತೆರೆಯಬೇಕು. ಬೇರೆ ರಾಜ್ಯಗಳಿಗೆ ಹೋಗಿ ಪರಿಶೀಲನೆ ಮಾಡಿ. ಅಲ್ಲಿನ ಸರ್ಕಾರಗಳು ಪ್ರತಿಯೊಂದು ಗ್ರಾಮದಲ್ಲಿ ಗೋಶಾಲೆ ಆರಂಭಿಸಿವೆ ಎಂದು ಸಿಜೆ ತಾಕೀತು ಮಾಡಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...