ಸಂಸತ್ ನ ಬಜೆಟ್ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಮಾನ ಮನಸ್ಕ ಪಕ್ಷಗಳ ಜೊತೆಗೂಡಿ ಕೆಲಸ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.
ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಂಸದೀಯ ರಣತಂತ್ರ ನಿರ್ಧಾರಕ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ರೈತರ ಆತ್ಮಹತ್ಯೆ, ಚೀನಾ ಗಡಿ ವಿವಾದ, ಏರ್ ಇಂಡಿಯಾವನ್ನು ಮಾಡಿರುವುದನ್ನು ಅಧಿವೇಶನದಲ್ಲಿ ಪ್ರಶ್ನಿಸಬೇಕು ಮತ್ತು ಕೊರೋನಾದಿಂದ ಮೃತಪಟ್ಟವರ ಕುಟುಂಬಗಳಿಗೆ ಪರ್ಯಾಯ ಘೋಷಿಸುವಂತೆ ಯು ಆಗ್ರಹಿಸಬೇಕು ಎಂಬ ನಿರ್ಧಾರಗಳನ್ನು ಸಭೆಯಲ್ಲಿ ಕೈಗೊಳ್ಳಲಾಗಿದೆ.
ಸಮಿತಿ ಸದಸ್ಯರಾದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಅಧಿರ್ ರಂಜನ್ ಚೌಧರಿ, ಜೈರಾಮ್ ರಮೇಶ್,ಕೆ.ಸಿ. ವೇಣುಗೋಪಾಲ್, ಇನ್ನು ಮುಂತಾದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು.