Wednesday, July 8, 2026
Wednesday, July 8, 2026

ರಾಜ್ಯದಲ್ಲಿ ಕೋವಿಡ್ ಪರಿಷ್ಕೃತ ಮಾರ್ಗಸೂಚಿ

Date:

ಡಿಸೆಂಬರ್ ಅಂತ್ಯ ಹಾಗೂ ಜನವರಿ ಪ್ರಾರಂಭದಲ್ಲಿ ರಾಜ್ಯಾದ್ಯಂತ ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಾಗಿದ್ದು ಎಲ್ಲರಲ್ಲೂ ಆತಂಕ ಮೂಡಿತ್ತು. ಆದರೆ ಈಗ ಕೋವಿಡ್ ಹೊಸ ಸೋಂಕಿತರ ಪ್ರಮಾಣ ಇಳಿಕೆಯಾಗಿರುವ ಜೊತೆಗೆ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ವರದಿ ಆಧಾರದ ನಿರ್ಬಂಧಗಳನ್ನು ಸಡಿಲಿಸಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪ್ರಮಾಣ ಒಟ್ಟು 4,02,857 ರಷ್ಟು ಇದೆ. 22,318ರಷ್ಟು 14 ವರ್ಷದೊಳಗಿನ ಮಕ್ಕಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. 401 ಮಕ್ಕಳು ಕೋವಿಡ್ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರ ಪ್ರಮಾಣ 6,732 ರಷ್ಟೀದೆ. ಇದುವರೆಗೆ ಕೋವಿಡ್ ನಿಂದಾಗಿ 146 ಮಂದಿ ಮೃತಪಟ್ಟಿದ್ದಾರೆ.

ರಾಜ್ಯ ಸರ್ಕಾರವು ಕೋವಿಡ್ ಸ್ಥಿತಿಗತಿ ಕುರಿತಂತೆ ವಿಸ್ತೃತ ಚರ್ಚೆ ನಡೆಸಿ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ ಶೇ.2 ಕ್ಕಿಂತ ಕಡಿಮೆ ಇರುವುದರಿಂದ ಕೋವಿಡ್ ನಿರ್ಬಂಧ ಸಡಲಿಸುವ ತೀರ್ಮಾನ ಕೈಗೊಂಡಿದೆ.

“ಸೋಮವಾರದಿಂದ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ರದ್ದಾಗಲಿದೆ. ಚಿತ್ರಮಂದಿರ ಮಲ್ಟಿಪ್ಲೆಕ್ಸ್ ಗಳಲ್ಲಿ ವೀಕ್ಷಕರು 2-3 ಗಂಟೆಗಳ ಕಾಲ ಕುಳಿತುಕೊಳ್ಳಬೇಕಾದ ಕಾರಣ ಒಟ್ಟು ಸಾಮರ್ಥ್ಯದ ಶೇ.50 ಆಸನ ಭರ್ತಿಗೆ ಅಷ್ಟೇ ಅವಕಾಶವಿದೆ. ಜಾತ್ರೆ ಧಾರ್ಮಿಕ ಸಮಾವೇಶ ಸೇರಿದಂತೆ ಎಲ್ಲಾ ರೀತಿಯಲ್ಲಿ ಜಾತ, ಪ್ರತಿಭಟನೆ, ಧರಣಿ ನಿರ್ಬಂಧ ವಿಸ್ತರಿಸಲಾಗಿದೆ” ಎಂದು ಸಚಿವ ಆರ್.ಅಶೋಕ್ ಅವರು ತಿಳಿಸಿದರು.

“ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಭೇಟಿ ನೀಡಲು ಮುಕ್ತ ಅವಕಾಶವಿದೆ. ಆದರೆ ಕೋವಿಡ್ ನಿಯಮಾವಳಿ ಮಾರ್ಗಸೂಚಿಗಳನ್ನು ಪಾಲಿಸಬೇಕು. ಉದ್ಯಾನವನಗಳಲ್ಲಿ ಸಫಾರಿ ಸೇರಿದಂತೆ ಇತರೆ ಚಟುವಟಿಕೆಗಳಿಗೂ ಅವಕಾಶ ನೀಡಲಾಗಿದೆ” ಎಂದು ಸಚಿವ ಆನಂದ್ ಸಿಂಗ್ ಅವರು ತಿಳಿಸಿದರು.

“ಸೋಮವಾರದಿಂದ ಬೆಂಗಳೂರಿನಲ್ಲಿ 1 ರಿಂದ 9ನೇ ತರಗತಿಗಳು ಪ್ರಾರಂಭವಾಗಲಿದೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಪಾಲನೆಯಾಗುತ್ತಿಲ್ಲ ಎಸ್ ಒ ಪಿ ಬೆಂಗಳೂರಿಗೂ ಅನ್ವಯವಾಗಲಿದೆ. ಯಾವುದೇ ಮಗುವಿಗೆ ಕೋವಿಡ್ ಪಾಸಿಟಿವ್ ಬಂದರೆ ಆ ತರಗತಿಯನ್ನು ಮುಚ್ಚಲಾಗುವುದು” ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...