ರಾಜ್ಯಾದ್ಯಂತ ಇಂದಿನಿಂದ ನೈಟ್ ಕರ್ಫ್ಯೂ ಅಂತ್ಯಗೊಳ್ಳಲಿದೆ. ಬಹುತೇಕ ಸಹಜಸ್ಥಿತಿ ಮರಳಲಿದೆ. ಕೊರೊನಾ ಸೋಂಕು ಹೆಚ್ಚಾಗಿದ್ದ ಕಾರಣಕ್ಕೆ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಇಂದಿನಿಂದ ಪುನರಾರಂಭಗೊಂಡಿದೆ.
ಕೊರೋನಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಶಾಲೆಗಳನ್ನು ತೆರೆಯಲು ಆಡಳಿತ ಮಂಡಳಿಗಳು ಸಜ್ಜಾಗಿವೆ. ಈ ಮಧ್ಯೆ, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ. ಭಾನುವಾರ ಬೆಂಗಳೂರಿನಲ್ಲಿ 11, 938 ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 28,264 ಪ್ರಕರಣಗಳು ಹಾಗೂ 68 ಸಾವು ವರದಿಯಾಗಿದೆ.
ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಿಗಿಂತ, ಸೋಂಕಿನಿಂದ ಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗುವ ಅವರ ಸಂಖ್ಯೆ ಹೆಚ್ಚಾಗಿದೆ.
ಮೈಸೂರು ಜಿಲ್ಲೆಯಲ್ಲಿ 10, ದಕ್ಷಿಣ ಕನ್ನಡ 7, ಚಿತ್ರದುರ್ಗ 3, ತುಮಕೂರು 4, ಚಾಮರಾಜನಗರ, ಕಲ್ಬುರ್ಗಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆ, ಮಂಡ್ಯ ಇಲ್ಲಿ ತಲಾ 2, ಗದಗ, ರಾಮನಗರ, ಶಿವಮೊಗ್ಗ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ