Sunday, December 7, 2025
Sunday, December 7, 2025

ಹುತಾತ್ಮರ ಸಚ್ಚಾರಿತ್ರ್ಯ ಸನ್ನಡತೆ ಪಾಲಿಸೋಣ

Date:

ಭಾರತದ ಸ್ವಾತಂತ್ರಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಇನ್ನು ಮುಂತಾದ ಮಹನೀಯರು ಬಲಿದಾನ ನೀಡಿದ್ದಾರೆ. ಆ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಸದಾ ನಮ್ಮನ್ನು ಜಾಗ್ರತ ಸ್ಥಿತಿಯಲ್ಲಿಡಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ” ದೇಶಕ್ಕಾಗಿ ನಾವಿಂದು ಪ್ರಾಣವನ್ನು ಕೊಡಬೇಕಾಗಿಲ್ಲ. ಆದರೆ, ಸಚ್ಚಾರಿತ್ರೆ ಹಾಗೂ ಸನ್ನಡತೆಯಿಂದ ತಮ್ಮ ಕ್ಷೇತ್ರಗಳಲ್ಲಿ ನಿಷ್ಠೆಯಿಂದ ದುಡಿಯಬೇಕು. ಸದೃಢ ದೇಶ ಕಟ್ಟಲು ನೆರವಾಗಬೇಕಿದೆ ಎಂದು ತ್ಯಾಗರಾಜ್ ಅವರು ತಿಳಿಸಿದ್ದಾರೆ.

ಭಾರತದ ಸರ್ವಜನಾಂಗದ ಕಲ್ಯಾಣದ ಬಗ್ಗೆ ಸದಾ ಚಿಂತಿಸುತ್ತಿದ್ದ ಗಾಂಧೀಜಿ, ಜಾತಿ ಮತದಿಂದಾಚೆಗೆ ಎಲ್ಲರಿಗೂ ಸಮಪಾಲು ಮತ್ತು ಸಮಾನ ಅವಕಾಶ ನೀಡುವಂತೆ ಬಲವಾಗಿ ಪ್ರತಿಪಾದಿಸಿದರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರುಪಾಕ್ಷ, ಡಾ. ಗಜಾನನ ಪ್ರಭು, ಮತ್ತು ಡಾ. ರವೀಂದ್ರಗೌಡ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ನಿವೃತ್ತ ಅಧ್ಯಾಪಕರಿಗೆ ಪಂಚಣಿ ಪರಿಷ್ಕರಣೆಯಿಂದ ಅನ್ಯಾಯ, ಸರಿಪಡಿಸಲು ಆಗ್ರಹ

ನಿವೃತ್ತ ಅಧ್ಯಾಪಕರಿಗೆ ಆಗುವ ಅನ್ಯಾಯವನ್ನು ಸರಿಪಡಿಸುವಂತೆ ಜಿಲ್ಲಾ ವಿಶ್ವವಿದ್ಯಾಲಯ ಮತ್ತು ಪದವಿ...

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...