Monday, April 6, 2026
Monday, April 6, 2026

ಹುತಾತ್ಮರ ಸಚ್ಚಾರಿತ್ರ್ಯ ಸನ್ನಡತೆ ಪಾಲಿಸೋಣ

Date:

ಭಾರತದ ಸ್ವಾತಂತ್ರಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಇನ್ನು ಮುಂತಾದ ಮಹನೀಯರು ಬಲಿದಾನ ನೀಡಿದ್ದಾರೆ. ಆ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಸದಾ ನಮ್ಮನ್ನು ಜಾಗ್ರತ ಸ್ಥಿತಿಯಲ್ಲಿಡಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ” ದೇಶಕ್ಕಾಗಿ ನಾವಿಂದು ಪ್ರಾಣವನ್ನು ಕೊಡಬೇಕಾಗಿಲ್ಲ. ಆದರೆ, ಸಚ್ಚಾರಿತ್ರೆ ಹಾಗೂ ಸನ್ನಡತೆಯಿಂದ ತಮ್ಮ ಕ್ಷೇತ್ರಗಳಲ್ಲಿ ನಿಷ್ಠೆಯಿಂದ ದುಡಿಯಬೇಕು. ಸದೃಢ ದೇಶ ಕಟ್ಟಲು ನೆರವಾಗಬೇಕಿದೆ ಎಂದು ತ್ಯಾಗರಾಜ್ ಅವರು ತಿಳಿಸಿದ್ದಾರೆ.

ಭಾರತದ ಸರ್ವಜನಾಂಗದ ಕಲ್ಯಾಣದ ಬಗ್ಗೆ ಸದಾ ಚಿಂತಿಸುತ್ತಿದ್ದ ಗಾಂಧೀಜಿ, ಜಾತಿ ಮತದಿಂದಾಚೆಗೆ ಎಲ್ಲರಿಗೂ ಸಮಪಾಲು ಮತ್ತು ಸಮಾನ ಅವಕಾಶ ನೀಡುವಂತೆ ಬಲವಾಗಿ ಪ್ರತಿಪಾದಿಸಿದರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರುಪಾಕ್ಷ, ಡಾ. ಗಜಾನನ ಪ್ರಭು, ಮತ್ತು ಡಾ. ರವೀಂದ್ರಗೌಡ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...