Monday, November 17, 2025
Monday, November 17, 2025

ಹುತಾತ್ಮರ ಸಚ್ಚಾರಿತ್ರ್ಯ ಸನ್ನಡತೆ ಪಾಲಿಸೋಣ

Date:

ಭಾರತದ ಸ್ವಾತಂತ್ರಕ್ಕಾಗಿ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್ ಇನ್ನು ಮುಂತಾದ ಮಹನೀಯರು ಬಲಿದಾನ ನೀಡಿದ್ದಾರೆ. ಆ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳು ಸದಾ ನಮ್ಮನ್ನು ಜಾಗ್ರತ ಸ್ಥಿತಿಯಲ್ಲಿಡಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಸಿ. ಎಂ. ತ್ಯಾಗರಾಜ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ” ದೇಶಕ್ಕಾಗಿ ನಾವಿಂದು ಪ್ರಾಣವನ್ನು ಕೊಡಬೇಕಾಗಿಲ್ಲ. ಆದರೆ, ಸಚ್ಚಾರಿತ್ರೆ ಹಾಗೂ ಸನ್ನಡತೆಯಿಂದ ತಮ್ಮ ಕ್ಷೇತ್ರಗಳಲ್ಲಿ ನಿಷ್ಠೆಯಿಂದ ದುಡಿಯಬೇಕು. ಸದೃಢ ದೇಶ ಕಟ್ಟಲು ನೆರವಾಗಬೇಕಿದೆ ಎಂದು ತ್ಯಾಗರಾಜ್ ಅವರು ತಿಳಿಸಿದ್ದಾರೆ.

ಭಾರತದ ಸರ್ವಜನಾಂಗದ ಕಲ್ಯಾಣದ ಬಗ್ಗೆ ಸದಾ ಚಿಂತಿಸುತ್ತಿದ್ದ ಗಾಂಧೀಜಿ, ಜಾತಿ ಮತದಿಂದಾಚೆಗೆ ಎಲ್ಲರಿಗೂ ಸಮಪಾಲು ಮತ್ತು ಸಮಾನ ಅವಕಾಶ ನೀಡುವಂತೆ ಬಲವಾಗಿ ಪ್ರತಿಪಾದಿಸಿದರು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ. ವಿರುಪಾಕ್ಷ, ಡಾ. ಗಜಾನನ ಪ್ರಭು, ಮತ್ತು ಡಾ. ರವೀಂದ್ರಗೌಡ ಇನ್ನು ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಬಿಜೆಪಿ- ಜೆಡಿಎಸ್ ಸಂಸದರು ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯೆತ್ತುವುದೇ ಇಲ್ಲ- ಸಿದ್ಧರಾಮಯ್ಯ

CM Siddharamaiah ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ...

Children’s Day ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನ ತಿಳಿಸಬೇಕು- ಜಿ.ವಿಜಯ್ ಕುಮಾರ್

Children's Day ಮಕ್ಕಳಿಗೆ ಮಾನವೀಯ ಮೌಲ್ಯಗಳು ಹಾಗೂ ಸಂಸ್ಕಾರವನ್ನು ನೀಡುವುದರ ಮೂಲಕ...