ಸೋಮವಾರದಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಪೆಗಾಸಸ್ ವಿವಾದ, ರೈತರ ಸಮಸ್ಯೆಗಳು ಮತ್ತು ಪೂರ್ವ ಲಡಾಕ್ ನಲ್ಲಿ ಚೀನಾದ ಆಕ್ರಮಣಗಳಂತಹ ವಿಷಗಳನ್ನು ಸರ್ಕಾರದ ವಿರುದ್ಧ ಅಸ್ತ್ರಗಳಾಗಿ ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ ಎಂದು ತಿಳಿದುಬಂದಿದೆ.
ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೈಹಿಕ ಅಂತರ ಕಾಯ್ದುಕೊಂಡು ಕೂರಬೇಕಾದ ಕಾರಣ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಪಾಳಿಗಳಲ್ಲಿ ನಡೆಸಲಾಗುತ್ತದೆ. ಅಲ್ಲದೆ ಎರಡು ಹಂತಗಳನ್ನು ಅಧಿವೇಶನ ನಡೆಯಲಿದೆ. ಅಧಿವೇಶನದ ಮೊದಲ ಭಾಗವು ಜನವರಿ 31ರಿಂದ ಪೆಬ್ರುವರಿ 11 ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
ನಂತರ ವಿವಿಧ ಇಲಾಖೆಗಳಿಗೆ ಬಜೆಟ್ ಹಂಚಿಕೆಗಳನ್ನು ಪರಿಶೀಲಿಸಲು ಬಿಡುವು ನೀಡಲಾಗುತ್ತದೆ. ಮಾರ್ಚ್ 14ರಂದು ಅಧಿವೇಶನ ಪುನರಾರಂಭವಾಗಲಿದ್ದು ಏಪ್ರಿಲ್ 8ರಂದು ಅಂತ್ಯಗೊಳ್ಳಲಿದೆ.
ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ. ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆಂಟ್ರಲ್ ಹಾಲ್ ಹಾಗೂ ಉಭಯ ಸದನಗಳ ಚೇಂಬರ್ ಗಳಲ್ಲಿ ಸಂಸದ ಆಸನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಷ್ಟ್ರಪತಿ ಭಾಷಣದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ 2021-22ನ್ನು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಸಂಸತ್ತಿನ ಬಜೆಟ್ ಅಧಿವೇಶನ ಆರಂಭ
Date: