Saturday, July 18, 2026
Saturday, July 18, 2026

ಸಂಸತ್ತಿನ ಬಜೆಟ್ ಅಧಿವೇಶನ ಆರಂಭ

Date:

ಸೋಮವಾರದಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಪೆಗಾಸಸ್ ವಿವಾದ, ರೈತರ ಸಮಸ್ಯೆಗಳು ಮತ್ತು ಪೂರ್ವ ಲಡಾಕ್ ನಲ್ಲಿ ಚೀನಾದ ಆಕ್ರಮಣಗಳಂತಹ ವಿಷಗಳನ್ನು ಸರ್ಕಾರದ ವಿರುದ್ಧ ಅಸ್ತ್ರಗಳಾಗಿ ಪ್ರಯೋಗಿಸಲು ಪ್ರತಿಪಕ್ಷಗಳು ಸಜ್ಜಾಗಿವೆ ಎಂದು ತಿಳಿದುಬಂದಿದೆ.
ಸಾಂಕ್ರಾಮಿಕ ಹಿನ್ನೆಲೆಯಲ್ಲಿ ದೈಹಿಕ ಅಂತರ ಕಾಯ್ದುಕೊಂಡು ಕೂರಬೇಕಾದ ಕಾರಣ, ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಪಾಳಿಗಳಲ್ಲಿ ನಡೆಸಲಾಗುತ್ತದೆ. ಅಲ್ಲದೆ ಎರಡು ಹಂತಗಳನ್ನು ಅಧಿವೇಶನ ನಡೆಯಲಿದೆ. ಅಧಿವೇಶನದ ಮೊದಲ ಭಾಗವು ಜನವರಿ 31ರಿಂದ ಪೆಬ್ರುವರಿ 11 ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.
ನಂತರ ವಿವಿಧ ಇಲಾಖೆಗಳಿಗೆ ಬಜೆಟ್ ಹಂಚಿಕೆಗಳನ್ನು ಪರಿಶೀಲಿಸಲು ಬಿಡುವು ನೀಡಲಾಗುತ್ತದೆ. ಮಾರ್ಚ್ 14ರಂದು ಅಧಿವೇಶನ ಪುನರಾರಂಭವಾಗಲಿದ್ದು ಏಪ್ರಿಲ್ 8ರಂದು ಅಂತ್ಯಗೊಳ್ಳಲಿದೆ.
ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಷಣದೊಂದಿಗೆ ಅಧಿವೇಶನ ಆರಂಭವಾಗಲಿದೆ. ಕೋವಿಡ್ -19 ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಸೆಂಟ್ರಲ್ ಹಾಲ್ ಹಾಗೂ ಉಭಯ ಸದನಗಳ ಚೇಂಬರ್ ಗಳಲ್ಲಿ ಸಂಸದ ಆಸನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾಷ್ಟ್ರಪತಿ ಭಾಷಣದ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ 2021-22ನ್ನು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...