Monday, February 2, 2026
Monday, February 2, 2026

ವಿಶ್ವ ಪರಂಪರೆಯ ತಾಣಗಳಾಗಿ ರಾಜ್ಯದ ಮೂರು ದೇವಾಲಯಗಳ ಸೇರ್ಪಡೆಗೆ ಮನವಿ

Date:

ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರದ ಹೊಯ್ಸಳ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಲಿವೆ. 2022-23 ನೇ ಸಾಲಿನ ಕರ್ನಾಟಕದ ಮೂರು ದೇವಸ್ಥಾನಗಳು ಶಿಫಾರಸು ಪಟ್ಟಿಯಲ್ಲಿದೆ.

ಈ ದೇವಾಲಯಗಳು ಕಲೆ ಹಾಗು ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದೆ. ಹೊಯ್ಸಳರ ಕಾಲದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗಿದೆ. 2015ರಿಂದ ಈ ಮೂರು ದೇವಸ್ಥಾನಗಳು ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಈ ದೇವಸ್ಥಾನಗಳನ್ನು ಕಾಯಂ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಯುನೆಸ್ಕೋದ ಭಾರತದ ಕಾಯಂ ಪ್ರತಿನಿಧಿ ವಿಶಾಲ್ ವಿ. ಶರ್ಮಾ ಔಪಚಾರಿಕವಾಗಿ ತಂಡಕ್ಕೆ ಭಾರತದ ಪಟ್ಟಿಯನ್ನು ನೀಡಿದ್ದಾರೆ. ಮುಂದಿನ ಹಂತವಾಗಿ ಯುನೆಸ್ಕೋದ ಸಮಿತಿ ಪಟ್ಟಿ ಪರಿಶೀಲನೆ ನಡೆಸಲಿದೆ. ಅನಂತರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ತಜ್ಞರ ಸಮಿತಿ ಪಟ್ಟಿಯನ್ನು ಪರಿಶೀಲನೆ ಮಾಡಿ ಭಾರತದ ಜೊತೆ ಮತ್ತೆ ಮಾತುಕತೆ ನಡೆಸಲಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಮೌಲ್ಯಮಾಪನ ನಡೆಯಲಿದೆ. 2023ರ ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸುವ ಕುರಿತು ಅಂತಿಮ ಘೋಷಣೆಯಾಗಲಿದೆ.

12ನೇ ಶತಮಾನದಲ್ಲಿ ನಿರ್ಮಾಣವಾದ ಎಲ್ಲಾ ದೇವಾಲಯಗಳು ಪ್ರಸ್ತುತ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಂರಕ್ಷಿತ ಸ್ಮಾರಕಗಳಾಗಿವೆ. ಭಾರತೀಯ ಪುರಾತತ್ವ ಇಲಾಖೆಯೇ ದೇವಸ್ಥಾನಗಳ ಉಸ್ತುವಾರಿ ನೋಡಿಕೊಳ್ಳುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...