Sunday, December 14, 2025
Sunday, December 14, 2025

ವಿಶ್ವ ಪರಂಪರೆಯ ತಾಣಗಳಾಗಿ ರಾಜ್ಯದ ಮೂರು ದೇವಾಲಯಗಳ ಸೇರ್ಪಡೆಗೆ ಮನವಿ

Date:

ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರದ ಹೊಯ್ಸಳ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಲಿವೆ. 2022-23 ನೇ ಸಾಲಿನ ಕರ್ನಾಟಕದ ಮೂರು ದೇವಸ್ಥಾನಗಳು ಶಿಫಾರಸು ಪಟ್ಟಿಯಲ್ಲಿದೆ.

ಈ ದೇವಾಲಯಗಳು ಕಲೆ ಹಾಗು ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದೆ. ಹೊಯ್ಸಳರ ಕಾಲದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗಿದೆ. 2015ರಿಂದ ಈ ಮೂರು ದೇವಸ್ಥಾನಗಳು ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಈ ದೇವಸ್ಥಾನಗಳನ್ನು ಕಾಯಂ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಯುನೆಸ್ಕೋದ ಭಾರತದ ಕಾಯಂ ಪ್ರತಿನಿಧಿ ವಿಶಾಲ್ ವಿ. ಶರ್ಮಾ ಔಪಚಾರಿಕವಾಗಿ ತಂಡಕ್ಕೆ ಭಾರತದ ಪಟ್ಟಿಯನ್ನು ನೀಡಿದ್ದಾರೆ. ಮುಂದಿನ ಹಂತವಾಗಿ ಯುನೆಸ್ಕೋದ ಸಮಿತಿ ಪಟ್ಟಿ ಪರಿಶೀಲನೆ ನಡೆಸಲಿದೆ. ಅನಂತರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ತಜ್ಞರ ಸಮಿತಿ ಪಟ್ಟಿಯನ್ನು ಪರಿಶೀಲನೆ ಮಾಡಿ ಭಾರತದ ಜೊತೆ ಮತ್ತೆ ಮಾತುಕತೆ ನಡೆಸಲಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಮೌಲ್ಯಮಾಪನ ನಡೆಯಲಿದೆ. 2023ರ ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸುವ ಕುರಿತು ಅಂತಿಮ ಘೋಷಣೆಯಾಗಲಿದೆ.

12ನೇ ಶತಮಾನದಲ್ಲಿ ನಿರ್ಮಾಣವಾದ ಎಲ್ಲಾ ದೇವಾಲಯಗಳು ಪ್ರಸ್ತುತ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಂರಕ್ಷಿತ ಸ್ಮಾರಕಗಳಾಗಿವೆ. ಭಾರತೀಯ ಪುರಾತತ್ವ ಇಲಾಖೆಯೇ ದೇವಸ್ಥಾನಗಳ ಉಸ್ತುವಾರಿ ನೋಡಿಕೊಳ್ಳುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...