Friday, March 14, 2025
Friday, March 14, 2025

ವಿಶ್ವ ಪರಂಪರೆಯ ತಾಣಗಳಾಗಿ ರಾಜ್ಯದ ಮೂರು ದೇವಾಲಯಗಳ ಸೇರ್ಪಡೆಗೆ ಮನವಿ

Date:

ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರದ ಹೊಯ್ಸಳ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಲಿವೆ. 2022-23 ನೇ ಸಾಲಿನ ಕರ್ನಾಟಕದ ಮೂರು ದೇವಸ್ಥಾನಗಳು ಶಿಫಾರಸು ಪಟ್ಟಿಯಲ್ಲಿದೆ.

ಈ ದೇವಾಲಯಗಳು ಕಲೆ ಹಾಗು ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದೆ. ಹೊಯ್ಸಳರ ಕಾಲದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗಿದೆ. 2015ರಿಂದ ಈ ಮೂರು ದೇವಸ್ಥಾನಗಳು ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಈ ದೇವಸ್ಥಾನಗಳನ್ನು ಕಾಯಂ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಯುನೆಸ್ಕೋದ ಭಾರತದ ಕಾಯಂ ಪ್ರತಿನಿಧಿ ವಿಶಾಲ್ ವಿ. ಶರ್ಮಾ ಔಪಚಾರಿಕವಾಗಿ ತಂಡಕ್ಕೆ ಭಾರತದ ಪಟ್ಟಿಯನ್ನು ನೀಡಿದ್ದಾರೆ. ಮುಂದಿನ ಹಂತವಾಗಿ ಯುನೆಸ್ಕೋದ ಸಮಿತಿ ಪಟ್ಟಿ ಪರಿಶೀಲನೆ ನಡೆಸಲಿದೆ. ಅನಂತರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ತಜ್ಞರ ಸಮಿತಿ ಪಟ್ಟಿಯನ್ನು ಪರಿಶೀಲನೆ ಮಾಡಿ ಭಾರತದ ಜೊತೆ ಮತ್ತೆ ಮಾತುಕತೆ ನಡೆಸಲಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಮೌಲ್ಯಮಾಪನ ನಡೆಯಲಿದೆ. 2023ರ ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸುವ ಕುರಿತು ಅಂತಿಮ ಘೋಷಣೆಯಾಗಲಿದೆ.

12ನೇ ಶತಮಾನದಲ್ಲಿ ನಿರ್ಮಾಣವಾದ ಎಲ್ಲಾ ದೇವಾಲಯಗಳು ಪ್ರಸ್ತುತ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಂರಕ್ಷಿತ ಸ್ಮಾರಕಗಳಾಗಿವೆ. ಭಾರತೀಯ ಪುರಾತತ್ವ ಇಲಾಖೆಯೇ ದೇವಸ್ಥಾನಗಳ ಉಸ್ತುವಾರಿ ನೋಡಿಕೊಳ್ಳುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Senior Chamber International Organization ಪುಷ್ಪ ಎಸ್ ಶೆಟ್ಟಿಅವರಿಗೆ ‌ಸೀನಿಯರ್ ಚೇಂಬರ್ ಉನ್ನತ ಪ್ರಶಸ್ತಿ

Senior Chamber International Organization ಬ್ರಹ್ಮಾವರದಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್...

State Film Awards 2020 ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಘೋಷಣೆ

State Film Awards 2020ನೇ ಸಾಲಿನ ಆಯ್ಕೆ ಸಮಿತಿಯು ಸಲ್ಲಿಸಿರುವ ವರದಿಯಲ್ಲಿ...

Klive Special ಹೆತ್ತವಳಿಗೊಂದು ಕವನ-ನಮನ

Klive Special ದೇವರ ಸ್ವರೂಪ ಗರ್ಭದಲ್ಲಿ ಹೊತ್ತುನವಮಾಸಕ್ಕೆ ಹೆತ್ತುಮೌಲ್ಯಗಳನ್ನೇ ಬಿತ್ತುಸಲಹಿದೆ ನೀಡಿ ಕೈತುತ್ತು ಅಮ್ಮ...

Guarantee Scheme ಸತ್ಯ & ಶುದ್ಧ ಮಾರ್ಗದಿಂದ ರಾಷ್ಟ್ರ ಕಟ್ಟಲು ಸಾಧ್ಯ- ಸಿ.ಎಸ್.ಚಂದ್ರಭೂಪಾಲ್

Guarantee Scheme ಅಂತರಂಗ ಮತ್ತು ಬಹಿರಂಗ ಶುದ್ದಿಯಿಂದ ಹಾಗೂ ಸತ್ಯದ ಮಾರ್ಗದಲ್ಲಿ...