Saturday, May 23, 2026
Saturday, May 23, 2026

ವಿಶ್ವ ಪರಂಪರೆಯ ತಾಣಗಳಾಗಿ ರಾಜ್ಯದ ಮೂರು ದೇವಾಲಯಗಳ ಸೇರ್ಪಡೆಗೆ ಮನವಿ

Date:

ಬೇಲೂರು, ಹಳೇಬೀಡು ಹಾಗೂ ಸೋಮನಾಥಪುರದ ಹೊಯ್ಸಳ ದೇವಸ್ಥಾನಗಳು ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಲಿವೆ. 2022-23 ನೇ ಸಾಲಿನ ಕರ್ನಾಟಕದ ಮೂರು ದೇವಸ್ಥಾನಗಳು ಶಿಫಾರಸು ಪಟ್ಟಿಯಲ್ಲಿದೆ.

ಈ ದೇವಾಲಯಗಳು ಕಲೆ ಹಾಗು ವಾಸ್ತುಶಿಲ್ಪ, ಸಂಸ್ಕೃತಿಯ ಪ್ರತೀಕವಾಗಿದೆ. ಹೊಯ್ಸಳರ ಕಾಲದಲ್ಲಿ ಇವುಗಳನ್ನು ನಿರ್ಮಾಣ ಮಾಡಲಾಗಿದೆ. 2015ರಿಂದ ಈ ಮೂರು ದೇವಸ್ಥಾನಗಳು ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಈ ದೇವಸ್ಥಾನಗಳನ್ನು ಕಾಯಂ ಪಟ್ಟಿಗೆ ಸೇರಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿದೆ.

ಯುನೆಸ್ಕೋದ ಭಾರತದ ಕಾಯಂ ಪ್ರತಿನಿಧಿ ವಿಶಾಲ್ ವಿ. ಶರ್ಮಾ ಔಪಚಾರಿಕವಾಗಿ ತಂಡಕ್ಕೆ ಭಾರತದ ಪಟ್ಟಿಯನ್ನು ನೀಡಿದ್ದಾರೆ. ಮುಂದಿನ ಹಂತವಾಗಿ ಯುನೆಸ್ಕೋದ ಸಮಿತಿ ಪಟ್ಟಿ ಪರಿಶೀಲನೆ ನಡೆಸಲಿದೆ. ಅನಂತರ ಅಂತಿಮ ತೀರ್ಮಾನ ಕೈಗೊಳ್ಳಲಿದೆ.

ತಜ್ಞರ ಸಮಿತಿ ಪಟ್ಟಿಯನ್ನು ಪರಿಶೀಲನೆ ಮಾಡಿ ಭಾರತದ ಜೊತೆ ಮತ್ತೆ ಮಾತುಕತೆ ನಡೆಸಲಿದೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಿನಲ್ಲಿ ಮೌಲ್ಯಮಾಪನ ನಡೆಯಲಿದೆ. 2023ರ ಜುಲೈ ಅಥವಾ ಆಗಸ್ಟ್ ತಿಂಗಳಿನಲ್ಲಿ ದೇವಾಲಯಗಳನ್ನು ಯುನೆಸ್ಕೋ ಪಟ್ಟಿಗೆ ಸೇರಿಸುವ ಕುರಿತು ಅಂತಿಮ ಘೋಷಣೆಯಾಗಲಿದೆ.

12ನೇ ಶತಮಾನದಲ್ಲಿ ನಿರ್ಮಾಣವಾದ ಎಲ್ಲಾ ದೇವಾಲಯಗಳು ಪ್ರಸ್ತುತ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಂರಕ್ಷಿತ ಸ್ಮಾರಕಗಳಾಗಿವೆ. ಭಾರತೀಯ ಪುರಾತತ್ವ ಇಲಾಖೆಯೇ ದೇವಸ್ಥಾನಗಳ ಉಸ್ತುವಾರಿ ನೋಡಿಕೊಳ್ಳುತ್ತಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...

Institute of International Finance ಐಐಎಫ್ ಶಿವಮೊಗ್ಗ ಚಾಪ್ಟರ್ ನ ನೂತನ ಪದಾಧಿಕಾರಿಳ ಆಯ್ಕೆ.

Institute of International Finance ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಫೌಂಡ್ರಿಮೆನ್ (IIF)...