Monday, June 23, 2025
Monday, June 23, 2025

ರಾಜ್ಯದ ನೀರಿನ ಪಾಲು ನಿರ್ಧಾರದ ಬಳಿಕ ನದಿಜೋಡಣೆಗೆ ಒಪ್ಪಿಗೆ

Date:

ಬಜೆಟ್ ನಲ್ಲಿ ಕಾವೇರಿ, ಕೃಷ್ಣ ಮತ್ತು ಪೆನ್ನಾರ್ ನದಿ ಜೋಡಣೆ ಪ್ರಸ್ತಾವವಿದೆ. ಯೋಜನೆಯಲ್ಲಿ ರಾಜ್ಯದ ನೀರಿನ ಪಾಲು ನಿರ್ಧಾರ ಆದ ಬಳಿಕವೇ ಇದಕ್ಕೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ರಾಜ್ಯದ ಬಂಡವಾಳ ಖಾತೆಗೆ ಹಿಂದೆ 26,000 ಕೋಟಿ ರೂ. ಬರುತ್ತಿತ್ತು. ಈ ಬಾರಿ 3 ಸಾವಿರ ರೂ. ಕೋಟಿ ಅಧಿಕವಾಗಿ ಬರುವ ನಿರೀಕ್ಷೆಯಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೂಲಸೌಕರ್ಯ ಯೋಜನೆಗಳು ಮೆಟ್ರೋ ಗೆ ಹೆಚ್ಚಿನ ಅನುದಾನ ಸಿಗಲಿದೆ.
ಸಣ್ಣ, ಅತಿ ಸಣ್ಣ ಕೈಗಾರಿಕೆಗಳ ಚೇತರಿಕೆ ರೂ.50 ಸಾವಿರ ಕೋಟಿಯಿಂದ ರೂ.5 ಲಕ್ಷಕೋಟಿ ನೀಡಲಾಗುವುದು.
ದೇಶದಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸಣ್ಣ ಕೈಗಾರಿಕೆಗಳಿವೆ. ಇದರ ಪ್ರಯೋಜನ ರಾಜ್ಯದ ಉದ್ಯಮಿಗಳಿಗೆ ಸಿಗಲಿದೆ ಎಂದರು.

ಡಿಜಿಟಲೀಕರಣ, ನಗರ ಯೋಜನೆ ತಜ್ಞರ ಬಳಕೆಗೆ ಒತ್ತು ನೀಡಲಾಗಿದೆ. ನಗರ ಸಾರಿಗೆಗೆ ದೊಡ್ಡ ಪ್ರಮಾಣದ ಅನುದಾನ ಮೀಸಲಿಡಲಾಗಿದೆ. ದೇಶದ ಕೃಷಿಯಲ್ಲಿ ಸ್ವಾವಲಂಬನೆಯ ದೃಷ್ಟಿಯಿಂದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ದೇಶಾದ್ಯಂತ ನೊಂದಣಿ ವ್ಯವಸ್ಥೆ ಒಂದೇ ಮಾದರಿ ಇರಬೇಕು ಎಂದು ಒನ್ ನೇಷನ್ ಒನ್ ಪ್ರಾಪರ್ಟಿ ಕಾರ್ಯಕ್ರಮ ರೂಪಿಸಲಾಗಿದೆ. ಬಹಳಷ್ಟು ರಾಜ್ಯಗಳಲ್ಲಿ ನೊಂದಣಿ ವ್ಯವಸ್ಥೆಯಲ್ಲಿ ವ್ಯತ್ಯಾಸಗಳಿವೆ. ಇವುಗಳನ್ನು ನಿವಾರಿಸಲು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...