Sunday, December 14, 2025
Sunday, December 14, 2025

ಸಚಿವ ಸಂಪುಟ ಪುನಾರಚನೆ ಸುಳಿವು:ಆಕಾಂಕ್ಷಿಗಳ ದಿಲ್ಲಿಯಾತ್ರೆ

Date:

ಫೆಬ್ರವರಿ 7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಸಚಿವ ಸ್ಥಾನದ ಆಕಾಂಕ್ಷಿ ಗಳಲ್ಲಿ ಮತ್ತಷ್ಟು ನಿರೀಕ್ಷೆ ಮನೆಮಾಡಿದೆ.

ಫೆಬ್ರವರಿ 7ರಂದು ಮುಖ್ಯಮಂತ್ರಿಯವರು ದಿಲ್ಲಿಗೆ ತೆರಳುವುದಾಗಿ ತಿಳಿಸಿದ್ದಾರೆ. ರಾಜ್ಯದ ಸಂಸದರೊಂದಿಗೆ ಮತ್ತು ಅಂತಾರಾಜ್ಯ ಜಲವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಸುವುದು ಈ ಭೇಟಿಯ ಉದ್ದೇಶವೆಂದು ಸಿಎಂ ಹೇಳಿದ್ದಾರೆ.

ಸಿಎಂ ದೆಹಲಿ ಪ್ರವಾಸ ಕೈಗೊಂಡ ಹಿನ್ನೆಲೆ ಈಗಾಗಲೇ ಸಂಪುಟಕ್ಕೆ ಮೇಜರ್ ಸರ್ಜರಿ ಕೈಗೊಳ್ಳಲಾಗುತ್ತದೆ ಎಂಬ ಚರ್ಚೆಗಳು ಬಹುದಿನದಿಂದ ನಡೆಯುತ್ತಿದೆ. ಸಂಪುಟ ಪುನರ್ ರಚನೆಗೆ ಹೈಕಮಾಂಡ್ ಸಿದ್ದ ವಿದೆಯೋ ಇಲ್ಲವೋ ಎಂಬುದು ಖಾತರಿಯಿಲ್ಲ. ಸಂಪುಟ ವಿಸ್ತರಣೆಗೆ ಸೀಮಿತವಾದರೆ ಕಾಲಿಇರುವ ನಾಲ್ಕು ಸ್ಥಾನ ಭರ್ತೀಯಾಗಲಿದೆ. ಆದರೆ ಈ ಬಗ್ಗೆ ಇನ್ನೂ ಮುಖ್ಯಮಂತ್ರಿ ಬೊಮ್ಮಾಯಿಯವರು ಸ್ಪಷ್ಟನೆ ನೀಡಿಲ್ಲ.

ಮಂತ್ರಿ ಸ್ಥಾನದ ಆಕಾಂಕ್ಷಿಗಳಲ್ಲಿ ಹಲವರು ದಿಲ್ಲಿಗೆ ದೌಡಾಯಿಸುವ ಲೆಕ್ಕಾಚಾರದಲ್ಲಿದ್ದಾರೆ. ಶಾಸಕ ಎಂ ಪಿ ರೇಣುಕಾಚಾರ್ಯ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಈಗಾಗಲೇ ಸಮಯ ಕೇಳಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಇನ್ನೂ ಕೆಲವರು ದಿಲ್ಲಿಗೆ ತೆರಳಲು ಮುಂದಾಗಿದ್ದಾರೆ. ಸಂಪುಟದ ಸದಸ್ಯರು ಕೂಡ ತಮ್ಮ ಸ್ಥಾನ ಉಳಿಸಿಕೊಳ್ಳಲು ಇದೇ ದಾರಿ ತುಳಿಯುವ ಸಾಧ್ಯತೆಯಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...