Thursday, March 19, 2026
Thursday, March 19, 2026

ನದಿಗಳ ಜೋಡಣೆ: ರಾಜ್ಯಗಳಲ್ಲಿ ಒಮ್ಮತ ಇದ್ದರಷ್ಟೇ ಜಾರಿಗೆ

Date:

ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಪ್ರಸ್ತಾಪಿಸಿರುವ ನದಿಗಳ ಜೋಡಣೆ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ ಎಂಬ ಮಾತು ವ್ಯಾಪಕವಾಗಿ ಕೇಳಲಾರಂಭಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.


ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ನಲ್ಲಿ ಗೋದಾವರಿ-ಕೃಷ್ಣ -ಪೆನ್ನಾರ್ ಹಾಗೂ ಕಾವೇರಿ ನದಿ ಜೋಡಣೆ ಯೋಜನೆ ಘೋಷಿಸಿದ್ದಾರೆ. ಈ ಯೋಜನೆ ಕಾರ್ಯರೂಪಕ್ಕೆ ಬಂದರೆ ಅತಿಹೆಚ್ಚಿನ ಪ್ರಯೋಜನವಾಗುವುದು ತಮಿಳುನಾಡಿಗೆ ಎಂದು ಎಂಬ ಮಾತು ಕೇಳಿಬರುತ್ತಿದೆ. ಜೊತೆಗೆ ಆಂಧ್ರಪ್ರದೇಶ ತೆಲಂಗಾಣಗಳು ಸ್ವಲ್ಪ ಪ್ರಯೋಜನ ಪಡೆಯಬಹುದು. ಸರಿ ರಾಜ್ಯಕ್ಕೆ ಯಾವುದೇ ರೀತಿಯ ಪ್ರಯೋಜನವಾಗದು ಎಂಬುದು ನೀರಾವರಿ ತಜ್ಞರ ಅಭಿಪ್ರಾಯವಾಗಿದೆ.
ಗೋದಾವರಿ ನದಿ ನೀರನ್ನು ಮೀರಜ್ -ಸಾಂಗ್ಲಿ ಮಾರ್ಗವಾಗಿ ಧಾರವಾಡಕ್ಕೆ ತಂದರಷ್ಟೇ ರಾಜ್ಯಕ್ಕೆ ಸ್ವಲ್ಪ ಅನುಕೂಲವಾಗಬಹುದು. ಆದರೆ ಇದಕ್ಕೆ ನೆರೆಯ ಮಹಾರಾಷ್ಟ್ರ ಒಪ್ಪುವುದೇ ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ಯೋಚನೆ ಕಾರ್ಯಗತವಾಗ ಬೇಕಾದರೆ ರಾಜ್ಯ ಸರ್ಕಾರಗಳ ಅನುಮತಿ ಅಗತ್ಯ. ಇಲ್ಲದಿದ್ದರೆ ಅಂತಾ ರಾಜ್ಯ ಜಲ ವಿವಾದ ಸೃಷ್ಟಿಯಾಗುವ ಸಾಧ್ಯತೆಗಳಿದ್ದು, ಪ್ರಕರಣಗಳು ನ್ಯಾಯಾಲಯದ ಮುಂದೆ ಹೋಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ನದಿಗಳ ಜೋಡಣೆಯ ವಿಚಾರದಿಂದ ಕರ್ನಾಟಕಕ್ಕೆ ಹೆಚ್ಚಿನ ಪ್ರಯೋಜನವಿಲ್ಲ. ನೀರಿನ ಲಭ್ಯತೆ ಆಧರಿಸಿ ಡಿಪಿಆರ್ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಯವರು ಹೇಳಿರುವುದು ಸೂಕ್ತವಾಗಿದೆ ಎಂದು ನೀರಾವರಿ ತಜ್ಞ ಪ್ರೊ. ನರಸಿಂಹಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...