Sunday, December 7, 2025
Sunday, December 7, 2025

ಜಿಗಿದ ರೇಷ್ಮೆಗೂಡಿನ ದರ: ಕೃಷಿಕರಿಗೆ ವರ

Date:

ರೇಷ್ಮೆಗೂಡಿಗೆ ಚಿನ್ನದ ಮೌಲ್ಯ ಬಂದಿದೆ. ರೇಷ್ಮೆ ಮಾರುಕಟ್ಟೆಗಳಲ್ಲಿ ರೇಷ್ಮೆಗೂಡಿಗೆ ಹೆಚ್ಚಿನ ದರ ಸಿಗದಂತೆ ನಿಯಂತ್ರಿಸುತ್ತಿದ್ದ ದಲ್ಲಾಳಿಗಳಿಗೆ ಕಡಿವಾಣ ಹಾಕಲಾಗಿದೆ. ಮಾರುಕಟ್ಟೆಗಳಲ್ಲಿ ಸಿಸಿಟಿವಿ ಅಳವಡಿಕೆ ಮಾಡಿ ರೇಷ್ಮೆ ಬೆಳೆಗಾರರಿಗೆ ಆಗುತ್ತಿದ್ದ ಕಿರುಕುಳವನ್ನು ತಪ್ಪಿಸಲಾಗಿದೆ. ರೇಷ್ಮೆ ಗೂಡು ಕದಿಯುತ್ತಿದ್ದವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕ್ರಮ, ಇ-ಪೇಮೆಂಟ್ ವ್ಯವಸ್ಥೆ ಜಾರಿ ಸೇರಿದಂತೆ ರೇಷ್ಮೆ ಸಚಿವ ಡಾ. ನಾರಾಯಣಗೌಡ ಅವರು ತೆಗೆದುಕೊಂಡ ಹಲವು ಕ್ರಮಗಳ ಪರಿಣಾಮವಾಗಿ ರೇಷ್ಮೆಗೂಡಿಗೆ ಉತ್ತಮ ಬೆಲೆ ಲಭ್ಯವಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆನ ದಿನಗಳಲ್ಲಿ ರೇಷ್ಮೆ ಗೂಡು ಗರಿಷ್ಠ ಪ್ರಮಾಣದಲ್ಲಿ ಮಾರಾಟವಾಗುತ್ತಿದೆ. ಅದರಲ್ಲೂ ಕೇಂದ್ರ ಸರ್ಕಾರವು ಆಮದು ಗೂಡಿಗೆ ತೆರಿಗೆ ಹೆಚ್ಚಿಸಿದ ಬಳಿಕ ದೇಶಿಯ ಗೂಡಿಗೆ ಎಲ್ಲೆಡೆ ಬೇಡಿಕೆ ಸೃಷ್ಟಿಯಾಗಿದೆ. ರಾಮನಗರವು ಏಷ್ಯಾದಲ್ಲಿಯೇ ಅತಿ ಹೆಚ್ಚು ರೇಷ್ಮೆ ಹುಳು ವಹಿವಾಟು ನಡೆಯುವ ಸ್ಥಳ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.

ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೇಷ್ಮೆಗೂಡು ದರವು ನಾಲ್ಕು ಅಂಕಿ ದಾಟಿದೆ. ಕೆ.ಜಿ. ರೇಷ್ಮೆ ಗೂಡಿಗೆ 1,043 ರೂಪಾಯಿಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...