Monday, April 6, 2026
Monday, April 6, 2026

ಜಲಧಾರೆ ಯೋಜನೆ : ಕರ್ನಾಟಕ ಪ್ರಥಮ ಸ್ಥಾನ – ಸಚಿವ ಈಶ್ವರಪ್ಪ

Date:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ 600ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪನವರು ತಿಳಿಸಿದ್ದಾರೆ.
ಶಿವಮೊಗ್ಗ ತಾಲೂಕು ಹೊಳಲೂರು ಅಂಬೇಡ್ಕರ್ ಭವನದಲ್ಲಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ನರೇಗಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆ ಕೇವಲ ಕೂಲಿಗಾಗಿ ಕೆಲಸ ಮಾಡುವಂತದ್ದಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸೃಜಿಸುವುದರೊಂದಿಗೆ ವೈಯಕ್ತಿಕ ಸೌಲಭ್ಯಗಳನ್ನು ಸಹ ಪಡೆಯುವ ಸದಾವಕಾಶವನ್ನು ಒದಗಿಸಿದೆ. ಯೋಜನೆಯಡಿ ರಾಜ್ಯದಲ್ಲಿ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆ ಸಾಮರ್ಥ್ಯವನ್ನು ವೃದ್ಧಿಸಿ ಅಧಿಕ ಆದಾಯ ಗಳಿಸಲು ಸಹ ಸಹಕಾರಿಯಾಗಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಪ್ರತಿಗ್ರಾಮದಲ್ಲಿ ಕನಿಷ್ಠ ಒಂದು ಕೆರೆ ಅಥವಾ ಕಟ್ಟೆಯ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದೆ.
ಇದರಿಂದಾಗಿ ಜಲಧಾರೆ ಯೋಜನೆಯಡಿ ನಮ್ಮ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Babu Jagjivanram ಬಾಬು ಜಗಜೀವನ ರಾಂ,ಶೋಷಿತ ವರ್ಗದ ದಾರುದೀಪ- ಎಸ್.ಎನ್.ಚನ್ನಬಸಪ್ಪ.

Babu Jagjivanram ಬಾಬು ಜಗಜೀವನ್ ರಾಮ್ ರವರು ಶೋಷಿತ ವರ್ಗದವರ ದಾರಿದೀಪವಾಗಿದ್ದು, ಸಮಾಜದ...

MESCOM ಏಪ್ರಿಲ್ 7. ಶಿವಮೊಗ್ಗ ನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM  ಶಿವಮೊಗ್ಗ ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-3 ಗುಡ್‌ಲಕ್ ಸರ್ಕಲ್ ಹತ್ತಿರ,...

Shivamogga Police ನಿದಿಗೆ ಚಾನಲ್ ನಲ್ಲಿ ಗಂಡಸಿನ ಶವಪತ್ತೆ.ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣೆ ಪ್ರಕಟಣೆ.

Shivamogga Police ಶಿವಮೊಗ್ಗ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿದಿಗೆ ಚಾನಲ್‌ನಲ್ಲಿ ಗಂಡಸಿನ...