Monday, May 19, 2025
Monday, May 19, 2025

ಜಲಧಾರೆ ಯೋಜನೆ : ಕರ್ನಾಟಕ ಪ್ರಥಮ ಸ್ಥಾನ – ಸಚಿವ ಈಶ್ವರಪ್ಪ

Date:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ 600ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪನವರು ತಿಳಿಸಿದ್ದಾರೆ.
ಶಿವಮೊಗ್ಗ ತಾಲೂಕು ಹೊಳಲೂರು ಅಂಬೇಡ್ಕರ್ ಭವನದಲ್ಲಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ನರೇಗಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆ ಕೇವಲ ಕೂಲಿಗಾಗಿ ಕೆಲಸ ಮಾಡುವಂತದ್ದಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸೃಜಿಸುವುದರೊಂದಿಗೆ ವೈಯಕ್ತಿಕ ಸೌಲಭ್ಯಗಳನ್ನು ಸಹ ಪಡೆಯುವ ಸದಾವಕಾಶವನ್ನು ಒದಗಿಸಿದೆ. ಯೋಜನೆಯಡಿ ರಾಜ್ಯದಲ್ಲಿ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆ ಸಾಮರ್ಥ್ಯವನ್ನು ವೃದ್ಧಿಸಿ ಅಧಿಕ ಆದಾಯ ಗಳಿಸಲು ಸಹ ಸಹಕಾರಿಯಾಗಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಪ್ರತಿಗ್ರಾಮದಲ್ಲಿ ಕನಿಷ್ಠ ಒಂದು ಕೆರೆ ಅಥವಾ ಕಟ್ಟೆಯ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದೆ.
ಇದರಿಂದಾಗಿ ಜಲಧಾರೆ ಯೋಜನೆಯಡಿ ನಮ್ಮ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Guarantee scheme ಜನ ಸಾಮಾನ್ಯರ ಬದುಕಿಗೆ ಗ್ಯಾರಂಟಿ ಯೋಜನೆಗಳು ಬೆಳಕಾಗಿವೆ

Guarantee scheme ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ನಾಡಿನ...

Klive Special Article ಭಯೋತ್ಪಾದನೆ‌ ಜಾಗತಿಕ ಜಾಗೃತಿಗೆಸರ್ವಸಮ್ಮತ ಸರ್ವಪಕ್ಷ‌ ನಿಯೋಗ.

Klive Special Article ಪೆಹಲ್ಗಾಂ ದುರಂತದ ನಂತರ ನಡೆದ ಬೆಳವಣಿಗೆಗಳಲ್ಲಿಮೂರು ಸಂಗತಿಗಳು ಸುದ್ದಿಮನೆಯನ್ನ...

Rajesh Keelambi “ಶಾಖಾಹಾರಿ” ನಿರ್ಮಾಪಕ ರಾಜೇಶ್ ಕೀಳಂಬಿ‌ ಅವರಿಗೆಡಾ.ಪುನೀತ್ ರಾಜ್ ಕುಮಾರ್ ಚೊಚ್ಚಲ ನಿರ್ಮಾಪಕ  ಪ್ರಶಸ್ತಿ

Rajesh Keelambi ಶಾಖಾಹಾರಿ ಚಿತ್ರದ ನಿರ್ಮಾಪಕಕೀಳಂಬಿ‌ ಮೀಡಿಯಾ ಲ್ಯಾಬ್ ಸಂಸ್ಥೆಯ ಎಂ.ಡಿ....

Shimog News ಹಿರಿಯೂರು ಕೃಷ್ಣಮೂರ್ತಿ ಸ್ಮರಣೀಯ ವ್ಯಕ್ತಿ,- ದತ್ತಾತ್ರೇಯ ಹೊಸಬಾಳೆ

Shimog News ತಾ.17-5-25 ರ ಶನಿವಾರ ಸಂಜೆ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...