Thursday, February 13, 2025
Thursday, February 13, 2025

ಜಲಧಾರೆ ಯೋಜನೆ : ಕರ್ನಾಟಕ ಪ್ರಥಮ ಸ್ಥಾನ – ಸಚಿವ ಈಶ್ವರಪ್ಪ

Date:

ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯದಲ್ಲಿ 600ಕ್ಕೂ ಹೆಚ್ಚು ಕಲ್ಯಾಣಿಗಳನ್ನು ಪುನರುಜ್ಜೀವನಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪನವರು ತಿಳಿಸಿದ್ದಾರೆ.
ಶಿವಮೊಗ್ಗ ತಾಲೂಕು ಹೊಳಲೂರು ಅಂಬೇಡ್ಕರ್ ಭವನದಲ್ಲಿ ಉದ್ಯೋಗ ಖಾತ್ರಿ ಯೋಜನೆ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ನರೇಗಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ನರೇಗಾ ಯೋಜನೆ ಕೇವಲ ಕೂಲಿಗಾಗಿ ಕೆಲಸ ಮಾಡುವಂತದ್ದಲ್ಲ. ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಸೃಜಿಸುವುದರೊಂದಿಗೆ ವೈಯಕ್ತಿಕ ಸೌಲಭ್ಯಗಳನ್ನು ಸಹ ಪಡೆಯುವ ಸದಾವಕಾಶವನ್ನು ಒದಗಿಸಿದೆ. ಯೋಜನೆಯಡಿ ರಾಜ್ಯದಲ್ಲಿ ಗ್ರಾಮಗಳನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಸಣ್ಣ ರೈತರು ತಮ್ಮ ಕೃಷಿ ಚಟುವಟಿಕೆ ಸಾಮರ್ಥ್ಯವನ್ನು ವೃದ್ಧಿಸಿ ಅಧಿಕ ಆದಾಯ ಗಳಿಸಲು ಸಹ ಸಹಕಾರಿಯಾಗಿದೆ ಎಂದರು.
ಕಳೆದ ಎರಡು ವರ್ಷಗಳಲ್ಲಿ ಪ್ರತಿಗ್ರಾಮದಲ್ಲಿ ಕನಿಷ್ಠ ಒಂದು ಕೆರೆ ಅಥವಾ ಕಟ್ಟೆಯ ಅಭಿವೃದ್ಧಿ ಯೋಜನೆ ಕೈಗೊಳ್ಳಲಾಗಿದೆ.
ಇದರಿಂದಾಗಿ ಜಲಧಾರೆ ಯೋಜನೆಯಡಿ ನಮ್ಮ ರಾಜ್ಯ ದೇಶಕ್ಕೆ ಪ್ರಥಮ ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of School Education and Literacy ಸಚಿವ ಮಧು ಬಂಗಾರಪ್ಪ‌‌‌ ಅವರ ಜಿಲ್ಲಾ ಪ್ರವಾಸ ಮಾಹಿತಿ

Department of School Education and Literacy ಶಾಲಾ ಶಿಕ್ಷಣ ಮತ್ತು...

Indian Air Force ಮೃತ ಮಂಜುನಾಥ್ ಅವರ ಮನೆಗೆ ಸಚಿವ‌ ಮಧು‌‌ ಬಂಗಾರಪ್ಪ ಭೇಟಿ & ಕುಟುಂಬಕ್ಕೆ ಸಾಂತ್ವನ

Indian Air Force ಇತ್ತೀಚಿಗೆ ಅಗ್ರಾದಲ್ಲಿ ತರಬೇತಿ ವೇಳೆ ನಿಧನರಾಗಿದ್ದ ಭಾರತೀಯ...

Mankuthimmana Kagga ಸಾಗರದಲ್ಲಿ ಮಂಕು ತಿಮ್ಮನ‌ ಕಗ್ಗ ವಾಚನ & ಅರ್ಥ ವಿವರಣೆ ಸ್ಪರ್ಧೆ

Mankuthimmana Kagga ಸರಸ್ವತಿ ಮೇಜರ್ ನಾಗರಾಜ್ ಕುಟುಂಬ ಕೊಟ್ಟಿರುವ ಡಿ...