Tuesday, December 9, 2025
Tuesday, December 9, 2025

ಶಿವಮೊಗ್ಗದಲ್ಲಿ ನೀರಿನ ಕಂದಾಯ ಅವೈಜ್ಞಾನಿಕ ಏರಿಕೆ – ಗೋಪಿನಾಥ್

Date:

ನಗರ ನೀರು ಸರಬರಾಜು ಮಂಡಳಿ 2021-22ನೇ ಸಾಲಿನ ನೀರಿನ ಕಂದಾಯವನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿದ್ದನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್ ಅವರು ವಿರೋಧಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರದೇಶವಾರು ಕೆಲವು ವಾರ್ಡ್ ಗಳಿಗೆ 4ರಿಂದ 8 ಸಾವಿರದವರೆಗೆ ಕಂದಾಯ ದರ ಏರಿಸಲಾಗಿದೆ.
ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾಗಿರುವ ನೀರಿನ ಮೇಲೆ ಈ ರೀತಿ ಕಂದಾಯವನ್ನು ಹೆಚ್ಚಿಸಿರುವುದು ಜನಸಾಮಾನ್ಯರ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಕೊರೊನಾದಿಂದ ಜನ ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಕಂದಾಯ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ನೀರಿನ ಕಂದಾಯವನ್ನು ಇಳಿಸಿ ಗ್ರಾಹಕರ ಮೇಲೆ ಹಾಕುವ ಭಾರವನ್ನು ಕಡಿಮೆ ಮಾಡಬೇಕು. ತಪ್ಪಿದರೆ ಸಾರ್ವಜನಿಕವಾಗಿ ಪ್ರತಿರೋಧಕ್ಕೆ ಗುರಿಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ನಗರದ ಪ್ರತಿ ವಾರ್ಡಿನ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳ ಸಭೆ ಕರೆದು ದರ ಪರಿಷ್ಕರಣೆ ಮಾಡುವುದು ಸೂಕ್ತ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...