Saturday, July 18, 2026
Saturday, July 18, 2026

ಶಿವಮೊಗ್ಗದಲ್ಲಿ ನೀರಿನ ಕಂದಾಯ ಅವೈಜ್ಞಾನಿಕ ಏರಿಕೆ – ಗೋಪಿನಾಥ್

Date:

ನಗರ ನೀರು ಸರಬರಾಜು ಮಂಡಳಿ 2021-22ನೇ ಸಾಲಿನ ನೀರಿನ ಕಂದಾಯವನ್ನು ಅವೈಜ್ಞಾನಿಕವಾಗಿ ಏರಿಕೆ ಮಾಡಿದ್ದನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್‌. ಗೋಪಿನಾಥ್ ಅವರು ವಿರೋಧಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಪ್ರದೇಶವಾರು ಕೆಲವು ವಾರ್ಡ್ ಗಳಿಗೆ 4ರಿಂದ 8 ಸಾವಿರದವರೆಗೆ ಕಂದಾಯ ದರ ಏರಿಸಲಾಗಿದೆ.
ಸಾರ್ವಜನಿಕರಿಗೆ ಅವಶ್ಯಕವಾಗಿ ಬೇಕಾಗಿರುವ ನೀರಿನ ಮೇಲೆ ಈ ರೀತಿ ಕಂದಾಯವನ್ನು ಹೆಚ್ಚಿಸಿರುವುದು ಜನಸಾಮಾನ್ಯರ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ತಿಳಿಸಿದರು.

ಕೊರೊನಾದಿಂದ ಜನ ಸಂಕಷ್ಟದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗ, ಕಂದಾಯ ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೀಗಾಗಿ ನೀರಿನ ಕಂದಾಯವನ್ನು ಇಳಿಸಿ ಗ್ರಾಹಕರ ಮೇಲೆ ಹಾಕುವ ಭಾರವನ್ನು ಕಡಿಮೆ ಮಾಡಬೇಕು. ತಪ್ಪಿದರೆ ಸಾರ್ವಜನಿಕವಾಗಿ ಪ್ರತಿರೋಧಕ್ಕೆ ಗುರಿಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ ನಗರದ ಪ್ರತಿ ವಾರ್ಡಿನ ಕ್ಷೇಮಾಭಿವೃದ್ಧಿ ಸಂಘಗಳ ಪದಾಧಿಕಾರಿಗಳ ಸಭೆ ಕರೆದು ದರ ಪರಿಷ್ಕರಣೆ ಮಾಡುವುದು ಸೂಕ್ತ ಎಂದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಉಪನ್ಯಾಸಕ ಹೆಚ್.ಟಿ.ಕರಿಬಸಪ್ಪನವರಿಗೆ ಕುವೆಂಪು ವಿವಿಯಿಂದ ಪಿಎಚ್.ಡಿ ಪದವಿ ಘೋಷಣೆ

Kuvempu University ಕರಿಬಸಪ್ಪ. ಹೆಚ್. ಟಿ ಕನ್ನಡ ಉಪನ್ಯಾಸಕರು ಸರ್ಕಾರಿ ಪದವಿ...

Department of Agriculture ತೀವ್ರ ಬರದ ಛಾಯೆ: ಜಲಾಶಯ ನಂಬಿ ಬೆಳೆ ಬೆಳೆಯದಂತೆ ರೈತರಲ್ಲಿ ಕೃಷಿ ಇಲಾಖೆ ಮನವಿ

Department of Agriculture ರಾಜ್ಯಾದ್ಯಂತ ತೀವ್ರಗೊಳ್ಳುತ್ತಿರುವ ಎಲ್ ನಿನೊ ಪರಿಣಾಮ ಹಾಗೂ...

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಗ್ರ ಮೂಲ ಸೌಕರ್ಯ,ಸುಸಜ್ಜಿತ ರಸ್ತೆ ಸಂಪರ್ಕಕ್ಕೆ ಆದ್ಯತೆ- ಬಿ.ವೈ.ರಾಘವೇಂದ್ರ

B.Y. Raghavendra ಶಿವಮೊಗ್ಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ...