Monday, February 2, 2026
Monday, February 2, 2026

ಕ್ರಿಕೆಟ್ ಅಂಡರ್ 19: ಕಾಂಗರೂ ಪಡೆಗೆ ಭಾರತ ಸವಾಲು

Date:

ಅಂಡರ್ 19 ಏಕದಿನ ವಿಶ್ವಕಪ್ ನ ಸೂಪರ್ ಲೀಗ್ ಎರಡನೇ ಫೈನಲ್ ನಲ್ಲಿ ಭಾರತ ತಂಡವು 291 ರನ್ ಗಳಿಸಿ ಆಸ್ಟ್ರೇಲಿಯಾ ತಂಡಕ್ಕೆ ಸವಾಲೊಡ್ಡಿದೆ.

ಕೂಲಿಡ್ಜ್ ಕ್ರಿಕೆಟ್ ಗ್ರೌಂಡ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ, ಬ್ಯಾಟ್ಸ್ಮನ್ಗಳ ಜವಾಬ್ದಾರಿಯುತ ಆಟದ ಸಹಾಯದಿಂದ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 290ರನ್ ಕಲೆಹಾಕಿತು. ಪಂದ್ಯದ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಅಂಗ್ ಕ್ರಿಶ್ ರಘುವಂಶಿ ಮತ್ತು ಹರ್ನೂರ್ ಸಿಂಗ್ ಕೇವಲ 37 ರಂ ಗಳಿಸಿ ಪೆವಿಲಿಯನ್ ನತ್ತ ಮುಖ ಮಾಡಿದರು.

ಮೂರನೇ ವಿಕೆಟ್ ಜೊತೆ ಆಟವಾಡಿದ ಶೇಖ್ ರಶೀದ್ ಮತ್ತು ಯಶ್ ಧುಲ್ ಜೋಡಿ ಕಾಂಗರೂ ಬೌಲಿಂಗ್ ಪಡೆಯನ್ನು ಧೂಳಿಪಟಗೈಯಿತು.

ಏತನ್ಮಧ್ಯೆ, ಧುಲ್ ಶತಕ ಸಂಭ್ರಮ ಆಚರಿಸಿದರು. ಆದರೆ ಕೆಲವೇ ಹೊತ್ತಿನಲ್ಲಿ ಅವರು ರನೌಟ್ ಆದರು. ರಶೀದ್ ಅವರು ಔಟ್ ಆಗುವ ಮೂಲಕ 6 ರನ್ ಗಳಿಂದ ಶತಕ ವಂಚಿತರಾದರು.

ಉಪನಾಯಕ ಔಟಾದ ಬಳಿಕ ರನ್ ವೇಗ ಕುಸಿಯಿತು. ಕೊನೆಯಲ್ಲಿ ವಿಕೆಟ್ ಕೀಪರ್ ದಿನೇಶ್ ಬಾಣಾ ಕೇವಲ ನಾಲ್ಕು ಎಸೆತಗಳಲ್ಲಿ ತಲಾ 2 ಫೊರ್, ಸಿಕ್ಸರ್ ನೊಂದಿಗೆ ಅಜೇಯ 20 ರನ್ ಸಿಡಿಸಿದ ಪರಿಣಾಮ ತಂಡದ ಮೊತ್ತ 290ರ ಗಡಿ ಮುಟ್ಟಿತು. ಆಸ್ಟ್ರೇಲಿಯಾ ಪರ ಜಾಕ್ ನಿಸ್ಬೆತ್ ಮತ್ತು ವಿಲಿಯಮ್ ಸಲ್ಜಾಮನ್ ತಲಾ 2 ವಿಕೆಟ್ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...