Friday, April 3, 2026
Friday, April 3, 2026

ಕ್ರಿಕೆಟ್ ಅಂಡರ್ 19: ಕಾಂಗರೂ ಪಡೆಗೆ ಭಾರತ ಸವಾಲು

Date:

ಅಂಡರ್ 19 ಏಕದಿನ ವಿಶ್ವಕಪ್ ನ ಸೂಪರ್ ಲೀಗ್ ಎರಡನೇ ಫೈನಲ್ ನಲ್ಲಿ ಭಾರತ ತಂಡವು 291 ರನ್ ಗಳಿಸಿ ಆಸ್ಟ್ರೇಲಿಯಾ ತಂಡಕ್ಕೆ ಸವಾಲೊಡ್ಡಿದೆ.

ಕೂಲಿಡ್ಜ್ ಕ್ರಿಕೆಟ್ ಗ್ರೌಂಡ್ ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡ, ಬ್ಯಾಟ್ಸ್ಮನ್ಗಳ ಜವಾಬ್ದಾರಿಯುತ ಆಟದ ಸಹಾಯದಿಂದ 50 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 290ರನ್ ಕಲೆಹಾಕಿತು. ಪಂದ್ಯದ ಉದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ ಅಂಗ್ ಕ್ರಿಶ್ ರಘುವಂಶಿ ಮತ್ತು ಹರ್ನೂರ್ ಸಿಂಗ್ ಕೇವಲ 37 ರಂ ಗಳಿಸಿ ಪೆವಿಲಿಯನ್ ನತ್ತ ಮುಖ ಮಾಡಿದರು.

ಮೂರನೇ ವಿಕೆಟ್ ಜೊತೆ ಆಟವಾಡಿದ ಶೇಖ್ ರಶೀದ್ ಮತ್ತು ಯಶ್ ಧುಲ್ ಜೋಡಿ ಕಾಂಗರೂ ಬೌಲಿಂಗ್ ಪಡೆಯನ್ನು ಧೂಳಿಪಟಗೈಯಿತು.

ಏತನ್ಮಧ್ಯೆ, ಧುಲ್ ಶತಕ ಸಂಭ್ರಮ ಆಚರಿಸಿದರು. ಆದರೆ ಕೆಲವೇ ಹೊತ್ತಿನಲ್ಲಿ ಅವರು ರನೌಟ್ ಆದರು. ರಶೀದ್ ಅವರು ಔಟ್ ಆಗುವ ಮೂಲಕ 6 ರನ್ ಗಳಿಂದ ಶತಕ ವಂಚಿತರಾದರು.

ಉಪನಾಯಕ ಔಟಾದ ಬಳಿಕ ರನ್ ವೇಗ ಕುಸಿಯಿತು. ಕೊನೆಯಲ್ಲಿ ವಿಕೆಟ್ ಕೀಪರ್ ದಿನೇಶ್ ಬಾಣಾ ಕೇವಲ ನಾಲ್ಕು ಎಸೆತಗಳಲ್ಲಿ ತಲಾ 2 ಫೊರ್, ಸಿಕ್ಸರ್ ನೊಂದಿಗೆ ಅಜೇಯ 20 ರನ್ ಸಿಡಿಸಿದ ಪರಿಣಾಮ ತಂಡದ ಮೊತ್ತ 290ರ ಗಡಿ ಮುಟ್ಟಿತು. ಆಸ್ಟ್ರೇಲಿಯಾ ಪರ ಜಾಕ್ ನಿಸ್ಬೆತ್ ಮತ್ತು ವಿಲಿಯಮ್ ಸಲ್ಜಾಮನ್ ತಲಾ 2 ವಿಕೆಟ್ ಪಡೆದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...