Monday, December 15, 2025
Monday, December 15, 2025

ಕ್ರಿಕೆಟ್ ಅಂಡರ್ 19ಭಾರತ ಫೈನಲ್ಸ್ ಪ್ರವೇಶ

Date:

ಭಾರತದ ಹಿರಿಯರ ಕ್ರಿಕೆಟ್ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೆಸ್ಟ್ ಹಾಗೂ ಏಕದಿನ ಸರಣಿಗಳೆರಡರಲ್ಲೂ ಸೋತಿದ್ದರಿಂದ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಶೆ ಉಂಟಾಗಿದೆ.

ಆದರೆ ಇದೀಗ ಕೆರಿಬಿಯನ್ ನಾಡಿನಲ್ಲಿ 19ರ ವಯೋಮಿತಿ ಏಕದಿನ ವಿಶ್ವಕಪ್ ಆಡುತ್ತಿರುವ ಯಶ್ ಧುಲ್ ಸಾರಥ್ಯದ ಕಿರಿಯರ ತಂಡ ಒಂದರ ನಂತರ ಇನ್ನೊಂದು ಎಂಬಂತೆ ಸಿಹಿಸುದ್ದಿ ಗಳ ಸರಮಾಲೆಯನ್ನೇ ಹೆಣೆಯುತ್ತಿದೆ.

ಅಜೇಯ ತಂಡವೆನಿಸಿಕೊಂಡು ಅಂತಿಮ ನಾಲ್ಕರ ಘಟ್ಟ ಪ್ರವೇಶಿಸಿದ ಭಾರತ ತಂಡ ಬುಧವಾರ ರಾತ್ರಿ ನಡೆದ ಸೂಪರ್ ಲೀಗ್ ಸೆಮಿಫೈನಲ್ಸ್ ನಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು 96 ರನ್ ಗಳ ಅಂತರದಿಂದ ಹಿಮ್ಮೆಟ್ಟಿಸಿ ಪ್ರಶಸ್ತಿ ಹೊಸ್ತಿಲು ತಲುಪಿದೆ.
ಕಿರಿಯರ ಏಕದಿನ ವಿಶ್ವಕಪ್ ನಲ್ಲಿ ಭಾರತ ಫೈನಲ್ ಪ್ರವೇಶಿಸಿರುವುದು ಇದು ಸತತ ನಾಲ್ಕನೇ ಬಾರಿ ಎನ್ನುವುದು ಗಮನಾರ್ಹ.
ಶನಿವಾರ ನಡೆಯಲಿರುವ ಪ್ರಶಸ್ತಿ ಫೈಟ್ ನಲ್ಲಿ ಭಾರತಕ್ಕೆ 1998ರ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ಎದುರಾಳಿಯಾಗಲಿದೆ. ಅಂದು ಆಂಗ್ಲರನ್ನೂ ಸೋಲಿಸಿದಲ್ಲಿ ಭಾರತ 14 ಆವೃತ್ತಿಗಳಲ್ಲಿ 5 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದಂತಾಗಲಿದೆ.

ಕೂಲಿಡ್ಜ್ ಕ್ರಿಕೆಟ್ ಮೈದಾನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡ, ನಾಯಕ ಯಶ್ ಧುಲ್ (110) ಹಾಗೂ ಉಪ ನಾಯಕ ಶೇಖ್ ರಶೀದ್ (94) ಜೋಡಿಯ 204 ರನ್ ಗಳ 3ನೇ ವಿಕೆಟ್ ಜೊತೆಯಾಟದ ನೆರವಿನಿಂದ 290 ರನ್ ಕಲೆ ಹಾಕಿತು.
ಇದು ಭಾರತದ 19ರ ವಯೋಮಿತಿ ತಂಡಕ್ಕೆ ಆಸ್ಟ್ರೇಲಿಯ ವಿರುದ್ಧ ವಿಶ್ವಕಪ್ ನಲ್ಲಿ ಲಭಿಸಿದ ಸತತ ಆರನೇ ಗೆಲುವಾಗಿದೆ. ಟೂರ್ನಿಯ ಇತಿಹಾಸದಲ್ಲಿ ಒಮ್ಮೆಯೂ ಆಸ್ಟ್ರೇಲಿಯಾಕ್ಕೆ ಮಣಿದಿಲ್ಲ ಎಂಬ ಹೆಗ್ಗಳಿಕೆ ಭಾರತದ್ದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...