Friday, April 3, 2026
Friday, April 3, 2026

ಮತ್ತೆ ಬಯಲಾದ ಚೀನಾದ ಸುಳ್ಳು ಗಾರಿಕೆ

Date:

ಪೂರ್ವ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಎರಡು ವರ್ಷ ಹಿಂದೆ ನಡೆದ ಸಂಘರ್ಷದ ವೇಳೆ ಮೃತಪಟ್ಟ ಭಾರತೀಯ ಸೈನಿಕರ ಸಂಖ್ಯೆ ಕುರಿತು ಚೀನಾ ಸುಳ್ಳು ಹೇಳಿರುವುದು ಬಯಲಾಗಿದೆ.

2020ರ ಜೂನ್ 15ರ ತಡರಾತ್ರಿ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದ ವೇಳೆ ಚೀನಾದ 38 ಸೈನಿಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆಸ್ಟ್ರೇಲಿಯಾದ ದಿ ಕ್ಲಾಕ್ಸನ್ ಪತ್ರಿಕೆ ವಿಶೇಷ ವರದಿ ಪ್ರಕಟಿಸಿದೆ.
ಸಂಘರ್ಷಣೆ ವೇಳೆ ನಾಲ್ವರು ಯೋಧರು ಮಾತ್ರ ಮೃತಪಟ್ಟಿದ್ದಾರೆ ಎಂದು ಘಟನೆ ನಡೆದ ಎಂಟು ತಿಂಗಳ ಬಳಿಕ ಚೀನಾ ಒಪ್ಪಿಕೊಂಡಿತ್ತು. ಅಲ್ಲದೇ ನಾಲ್ವರಿಗೂ ಸೇನಾ ಮೇಡಲ್ ನೀಡಿತ್ತು . ಆದರೆ ಸೈನಿಕರ ಸಾವಿನ ಸಂಖ್ಯೆಯಲ್ಲಿ ಚೀನಾ ಕಳ್ಳಾಟ ಈಗ ಬಯಲಾಗಿದೆ. ಸಂಘರ್ಷದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ.
ಸಾಮಾಜಿಕ ಜಾಲತಾಣ ಸಂಶೋಧಕರು, ಚೀನಾ ಬ್ಲಾಗರ್ ಗಳು , ಕಮುನಿಸ್ಟ್ ರಾಷ್ಟ್ರದ ಗಡಿ ನಾಗರಿಕರು ಹಾಗೂ ಮಾಧ್ಯಮಗಳ ವರದಿ ಆಧರಿಸಿ ಆಸ್ಟ್ರೇಲಿಯ ಪತ್ರಿಕೆಯು ಚೀನಾ ಸೈನಿಕರ ಸಾವಿನ ಸಂಖ್ಯೆ ಪ್ರಕಟಿಸಿದೆ.
ಇದಕ್ಕೂ ಮೊದಲು ಸಾವಿನ ಕುರಿತ ವರದಿಗಳನ್ನು ಚೀನಾ ಡಿಲೀಟ್ ಮಾಡಿಸಿತ್ತು. ಆದರೆ ಈಗ ವಿದೇಶಿ ಪತ್ರಿಕೆ ವರದಿ ಪ್ರಕಟಿಸಿರುವುದರಿಂದ ಚೀನಾ ಅಸಹಾಯಕವಾದಂತಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...