Monday, August 24, 2026
Monday, August 24, 2026

ಕನ್ನಡದ ಪ್ರಥಮ ರಾಜಮನೆತನದ ಶಾಸನ ಸೊರಬ ತಲಗುಂದದಲ್ಲಿ ಪತ್ತೆ

Date:

ಶಿವಮೊಗ್ಗದ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಆರ್ ಶೇಜೇಶ್ವರ ಮತ್ತು ಚುರ್ಚಿಗುಂಡಿ ಮಂಜಪ್ಪ ಅವರು ಸೊರಬ ತಾಲೂಕಿನ ತಲಗುಂದ ಗ್ರಾಮದಲ್ಲಿ ಕ್ಷೇತ್ರ ಕಾರ್ಯ ಕೈಗೊಂಡಿದ್ದರು.

ಪ್ರಸ್ತುತ ಊರಿನ ಈಶ್ವರ ದೇವಾಲಯದ ಆವರಣದಲ್ಲಿ ಕರ್ನಾಟಕವನ್ನು ಆಳಿದ ರಾಜ್ಯದ ಪ್ರಥಮ ಕನ್ನಡ ಮನೆತನವಾದ ಕದಂಬ ಅರಸರ ರವಿವರ್ಮನ ಕಾಲದ ಶಾಸನವು ಪತ್ತೆಯಾಗಿದೆ.

ಕಲ್ಲಿನ ಮೇಲಿರುವ ಶಾಸನವು 143 ಸೆಂ.ಮೀ ಉದ್ದ ಹಾಗೂ 49 ಸೆಂ.ಮೀ ಅಗಲವಿದ್ದು, ಬ್ರಾಹ್ಮಿ ಲಿಪಿ ಹಾಗೂ ಸಂಸ್ಕೃತ ಬಾಷೆಯ ಏಳು ಸಾಲಿನಿಂದ ಕೂಡಿದೆ.
ಶಾಸನವು ಅಲ್ಲಲ್ಲಿ ಸ್ವಲ್ಪ ಮಸುಕಾಗಿದೆ.
ಬನವಾಸಿ ಕದಂಬರ ರವಿವರ್ಮನಿಗೆ ಸಂಬಂಧಿಸಿದಂತೆ ಇದುವರೆಗೂ 10 ಶಾಸನಗಳು ಮಾತ್ರ ಕಂಡುಬಂದಿವೆ.
ಈಗ ದೊರೆತಿರುವ ಶಾಸನವು ಸೇರಿ 11 ಶಾಸನಗಳು ಕಂಡುಬದಂತಾಗಿವೆ. ರವಿವರ್ಮನು ಬನವಾಸಿಯನ್ನು ರಾಜಧಾನಿಯಾಗಿ ಮಾಡಿಕೊಂಡು ಕ್ರಿ.ಶ. 485 ರಿಂದ ಕ್ರಿ.ಶ. 519ರವರೆಗೆ ಸುಮಾರು 34 ವರ್ಷಗಳು ಆಳ್ವಿಕೆ ಮಾಡಿದ್ದು ಈ ಶಾಸನದಲ್ಲಿ ಹಾರಿತಿಯ ಪುತ್ರರಾದ ಮಾನವ್ಯಸ ಗೋತ್ರಕ್ಕೆ ಸೇರಿದ ಚರ್ಚೆಯಲ್ಲಿ ಪ್ರಸಿದ್ಧರಾದ ಕದಂಬ ವಂಶದ ಮೃಗೇಶವರ್ಮನ ಮಗನಾದ ಮಂಡಲದ ಅಧಿಪತಿಯಾದ ರವಿವರ್ಮನು ದೇವತೆಗಳಿಂದ ಪೂಜಿಸಲ್ಪಟ್ಟು ಪ್ರಸಿದ್ದನಾಗಿದ್ದು ಮುಚ್ಚುಂಡಿಯ ಗ್ರಾಮದಲ್ಲಿ ಆರನೇ ಒಂದು ಭಾಗನ್ನು ದಾನ ನೀಡಿದ್ದಾರೆ.
ದಾನ ನೀಡಿದ ಗ್ರಾಮವು ಶಿಕಾರಿಪುರ ತಾಲ್ಲೂಕಿನ ಅಗ್ರಹಾರ ಮುಚ್ಚಡಿ ಅಥವಾ ಮಾಯಿತಮ್ಮನ ಮುಚ್ಚಡಿ ಆಗಿರಬಹುದಾಗಿದೆ. ಈ ಶಾಸನವು ಕ್ರಿ.ಶ. 5-6ನೇ ಶತಮಾನದ್ದಾಗಿದೆ. ಈ ಶಾಸನದ ಹತ್ತಿರ ಕದಂಬ ಅರಸರ ಕಾಲದ ಸಿಂಹ ಶಿಲ್ಪವು ಸಹ ದೊರೆತಿದೆ.

ಇದರ ಅಕ್ಕಪಕ್ಕದಲ್ಲಿಯೇ ಇತರೆ ಶಾಸನಗಳು, ಶಿವಲಿಂಗಗಳು, ಸಪ್ತಮಾತೃಕೆ ಶಿಲ್ಪಗಳು ಕಂಡುಬರುತ್ತವೆ.

ಈ ಶಾಸನವನ್ನು ಪತ್ತೆ ಹಚ್ಚುವಲ್ಲಿ ಗ್ರಾಮಸ್ಥರಾದ ಮೇಘರಾಜ್, ಮಲ್ಲಿಕಾರ್ಜುನ ,ಶಾಸನವನ್ನು ಓದಿಕೊಟ್ಟ ಡಾ.ಜಗದೀಶ ಮತ್ತು ನಾಗರಾಜ ರಾವ್ ಮೈಸೂರು ಸಹಕರಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...