Monday, February 16, 2026
Monday, February 16, 2026

ಕ್ಯಾನ್ಸರ್ ಗೆ ಜನೌಷಧ ಕೇಂದ್ರದಲ್ಲಿ ಔಷಧಿ ಲಭ್ಯ – ಸಿಎಂ ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯದ ಎಲ್ಲಾ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಜನೌಷಧ ಕೇಂದ್ರಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಔಷಧಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದೆಂದು ಈ ವೇಳೆ ತಿಳಿಸಿದರು.

“ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ 2 ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚುವ ಪೆಟ್ ಸ್ಕ್ಯಾನ್ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂಂ. ಗಳವರೆಗೆ ವೆಚ್ಚವಾಗುತ್ತದೆ. ಬಡ ರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8ರಿಂದ 10 ಸಾವಿರದೊಳಗೆ ನೀಡಲು ತೀರ್ಮಾನಿಸಲಾಗಿದೆ” ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

“ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್ ಗೆ ಚಿಕಿತ್ಸೆ ಲಭ್ಯವಿದ್ದು, ಯಾರು ಧೃತಿಗೆಡಬೇಕಾಗಿಲ್ಲ. ಚಿಕಿತ್ಸೆ ನಂತರ ಆರೋಗ್ಯಕರ ಜೀವನ ನಡೆಸಬಹುದಾಗಿದೆ. ತಾಲೂಕು ಮಟ್ಟದ ಆಸ್ಪತ್ರೆಯಿಂದ ಹಿಡಿದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಿಂದ ಒಂದು ವರ್ಷ ಕಾಲ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ನಿವಾರಣೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...