Sunday, December 14, 2025
Sunday, December 14, 2025

ಕ್ಯಾನ್ಸರ್ ಗೆ ಜನೌಷಧ ಕೇಂದ್ರದಲ್ಲಿ ಔಷಧಿ ಲಭ್ಯ – ಸಿಎಂ ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯದ ಎಲ್ಲಾ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಜನೌಷಧ ಕೇಂದ್ರಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಔಷಧಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದೆಂದು ಈ ವೇಳೆ ತಿಳಿಸಿದರು.

“ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ 2 ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚುವ ಪೆಟ್ ಸ್ಕ್ಯಾನ್ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂಂ. ಗಳವರೆಗೆ ವೆಚ್ಚವಾಗುತ್ತದೆ. ಬಡ ರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8ರಿಂದ 10 ಸಾವಿರದೊಳಗೆ ನೀಡಲು ತೀರ್ಮಾನಿಸಲಾಗಿದೆ” ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

“ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್ ಗೆ ಚಿಕಿತ್ಸೆ ಲಭ್ಯವಿದ್ದು, ಯಾರು ಧೃತಿಗೆಡಬೇಕಾಗಿಲ್ಲ. ಚಿಕಿತ್ಸೆ ನಂತರ ಆರೋಗ್ಯಕರ ಜೀವನ ನಡೆಸಬಹುದಾಗಿದೆ. ತಾಲೂಕು ಮಟ್ಟದ ಆಸ್ಪತ್ರೆಯಿಂದ ಹಿಡಿದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಿಂದ ಒಂದು ವರ್ಷ ಕಾಲ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ನಿವಾರಣೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...