Monday, August 17, 2026
Monday, August 17, 2026

ಕ್ಯಾನ್ಸರ್ ಗೆ ಜನೌಷಧ ಕೇಂದ್ರದಲ್ಲಿ ಔಷಧಿ ಲಭ್ಯ – ಸಿಎಂ ಬೊಮ್ಮಾಯಿ

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ರಾಜ್ಯದ ಎಲ್ಲಾ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಜನೌಷಧ ಕೇಂದ್ರಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಔಷಧಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದೆಂದು ಈ ವೇಳೆ ತಿಳಿಸಿದರು.

“ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ 2 ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮಕೈಗೊಳ್ಳಲಾಗುತ್ತಿದೆ. ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚುವ ಪೆಟ್ ಸ್ಕ್ಯಾನ್ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂಂ. ಗಳವರೆಗೆ ವೆಚ್ಚವಾಗುತ್ತದೆ. ಬಡ ರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8ರಿಂದ 10 ಸಾವಿರದೊಳಗೆ ನೀಡಲು ತೀರ್ಮಾನಿಸಲಾಗಿದೆ” ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

“ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್ ಗೆ ಚಿಕಿತ್ಸೆ ಲಭ್ಯವಿದ್ದು, ಯಾರು ಧೃತಿಗೆಡಬೇಕಾಗಿಲ್ಲ. ಚಿಕಿತ್ಸೆ ನಂತರ ಆರೋಗ್ಯಕರ ಜೀವನ ನಡೆಸಬಹುದಾಗಿದೆ. ತಾಲೂಕು ಮಟ್ಟದ ಆಸ್ಪತ್ರೆಯಿಂದ ಹಿಡಿದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಿಂದ ಒಂದು ವರ್ಷ ಕಾಲ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ನಿವಾರಣೆಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಮುಖ ಧ್ಯೇಯವೇ ದೇಶಪ್ರೇಮ- ಶಕುಂತಳಾ ಚಂದ್ರಶೇಖರ್

Bharat Scouts and Guides ನಮ್ಮ ದೇಶದ 80ನೇ ಸ್ವಾತಂತ್ರ್ಯೋತ್ಸವವನ್ನು ಭಾರತ್...

Chamber of commerce Shivamogga ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಜಾಗತಿಕವಾಗಿ ಗಂಭೀರ ಸಮಸ್ಯೆಯಾಗಿದೆ: ಆರ್.ಮನೋಹರ್

Chamber of commerce Shivamogga ಶಿವಮೊಗ್ಗ ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್...

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...