Wednesday, July 8, 2026
Wednesday, July 8, 2026

ಗಾಯಕ ಎಂ ವೆಂಕಟೇಶ್ ಕುಮಾರ್ ಅವರಿಗೆ ಕಾಳಿದಾಸ ಸಮ್ಮಾನ್

Date:

ಮಧ್ಯಪ್ರದೇಶ ಸರ್ಕಾರವು ನೀಡುವ ಪ್ರತಿಷ್ಠಿತ ‘ಕಾಳಿದಾಸ ಸಮ್ಮಾನ್’ ಪ್ರಶಸ್ತಿಗೆ ಖ್ಯಾತ ಹಿಂದೂಸ್ತಾನಿ ಸಂಗೀತ ಗಾಯಕ ಪಂ. ವೆಂಕಟೇಶ್ ಕುಮಾರ್ ಅವರು ಭಾಜನರಾಗಿದ್ದಾರೆ.

ಪಂ. ವೆಂಕಟೇಶ್ ಕುಮಾರ್ ಅವರು ಹಿಂದೂಸ್ತಾನಿ ಗಾಯನ ಮಾತ್ರವಲ್ಲದೆ, ಭಜನೆಗಳು ಕೀರ್ತನೆಗಳು ಹಾಗೂ ವಿಶೇಷವಾಗಿ ದಾಸರಪದ ಮತ್ತು ವಚನಗಳನ್ನು ಹಾಡುವ ಮೂಲಕ ಜನರಿಂದ ಸೈ ಎನಿಸಿಕೊಂಡಿದ್ದಾರೆ.

ಧಾರವಾಡದ ವಿಶ್ವವಿದ್ಯಾಲಯದಲ್ಲಿ ಸಂಗೀತ್ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ವೆಂಕಟೇಶ್ ಕುಮಾರ್ ಅವರು ಆಕಾಶವಾಣಿಯ ‘ಎ’ ಶ್ರೇಣಿಯ ಕಲಾವಿದರು ಆಗಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಪ್ರತಿಷ್ಠಿತ ಸಂಗೀತ ಮೇಳಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಇವರದ್ದು.

ವೆಂಕಟೇಶ್ ಕುಮಾರ್ ಅವರ ಸಂಗೀತ ಸಾಧನೆಗೆ ಪದ್ಮಶ್ರೀ, ಸಂಗೀತ ಅಕಾಡೆಮಿ ಪುರಸ್ಕಾರಗಳು, ಕರ್ನಾಟಕ ರಾಜ್ಯೋತ್ಸವ ಸೇರಿದಂತೆ ಹಲವಾರು ಪುರಸ್ಕಾರಗಳು ಲಭಿಸಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...