Sunday, December 7, 2025
Sunday, December 7, 2025

ಪಂಚರಾಜ್ಯ ಚುನಾವಣೆ ಬಳಿಕ ಎಂಎಸ್ ಪಿ ಚರ್ಚೆ

Date:

ಪಂಚ ರಾಜ್ಯ ಚುನಾವಣೆ ಮುಗಿದ ಬಳಿಕ ಕನಿಷ್ಠ ಬೆಂಬಲ ಬೆಲೆ ಕುರಿತು ಚರ್ಚಿಸಲು ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ ತೋಮರ್, ಎಂಎಸ್ ಪಿಗೆ ಕಾನೂನು ಮಾನ್ಯತೆ ನೀಡುವ ಸಂಬಂಧ ಸಮಿತಿ ರಚಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ಭರವಸೆ ನೀಡಿರುವುದು ಇಡೀ ದೇಶಕ್ಕೇ ಗೊತ್ತಿದೆ. ಸಮಿತಿ ರಚನೆ ಪ್ರಕ್ರಿಯೆಯನ್ನು ಕೃಷಿ ಸಚಿವಾಲಯ ಕೈಗೆತ್ತಿಕೊಂಡಿದೆ.
ಈ ಸಂಬಂಧ ಸಚಿವಾಲಯವು ಚುನಾವಣಾ ಆಯೋಗದ ಸ್ಪಷ್ಟನೆ ಕೋರಿತ್ತು.

ಪಂಚರಾಜ್ಯ ಚುನಾವಣೆ ಮುಗಿದ ಬಳಿಕ ಸಮಿತಿ ರಚಿಸುವಂತೆ ಆಯೋಗ ಸೂಚನೆ ನೀಡಿದೆ ಎಂದು ತಿಳಿಸಿದರು. ದೇಶದ ಅಗತ್ಯಕ್ಕೆ ಅನುಗುಣವಾಗಿ ಬೆಳೆ ಪದ್ಧತಿಯಲ್ಲಿ ಬದಲಾವಣೆ ತರುವುದು, ಎಂಎಸ್ ಪಿಯನ್ನು ಮತ್ತಷ್ಟು ಪರಿಣಾಮಕಾರಿ ಹಾಗೂ ಪಾರದರ್ಶಕವಾಗಿಸುವುದು, ಸಹಜ ಕೃಷಿಗೆ ಉತ್ತೇಜನ ನೀಡುವುದು ಈ ಮೂರು ವಿಷಯಗಳ ಕುರಿತು ಸಮಿತಿಯು ಸರ್ಕಾರಕ್ಕೆ ಶಿಫಾರಸು ನೀಡಲಿದೆ.

ಉತ್ಪಾದನಾ ವೆಚ್ಚಕ್ಕಿಂತ ಶೇ.50ರಷ್ಟು ಅಧಿಕ ಎಂಎಸ್ ಪಿ ಘೋಷಿಸಬೇಕೆಂಬ ಡಾ. ಸ್ವಾಮಿನಾಥನ್ ಆಯೋಗವು ಮಾಡಿದ್ದ ಶಿಫಾರಸನ್ನು ಅಂದಿನ ಸರಕಾರದ ಅಂತರ್ ಸಚಿವಾಲಯ ಸಮಿತಿ ತಿರಸ್ಕರಿಸಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...