Tuesday, December 9, 2025
Tuesday, December 9, 2025

ಕೋವಿಡ್ ಸೋಂಕು ತಗ್ಗಿದಂತೆ ಕೊಲ್ಲಿ ದೇಶಗಳಿಗೆ ಕಾರ್ಮಿಕರ ಪ್ರಯಾಣ

Date:

ಕೊರೋನಾ ಬಿಕ್ಕಟ್ಟಿನ ಸಂದರ್ಭ 6 ಕೊಲ್ಲಿ ರಾಷ್ಟ್ರಗಳಿಂದ ಏನು ಲಕ್ಷ ಮಂದಿ ಭಾರತೀಯ ಕಾರ್ಮಿಕರು ತವರಿಗೆ ಮರಳಿದ್ದಾರೆ.

ಒಂದೇ ಭಾರತ ಅಭಿಯಾನದ ಅಡಿಯಲ್ಲಿ ಕಾರ್ಮಿಕರು ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ.

ಹೀಗೆ ಬಂದವರಲ್ಲಿ ಹಲವಾರು ಮಂದಿ ಕೋವಿಡ್ ಸಂಖ್ಯೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಮತ್ತೆ ಕೊಲ್ಲಿ ರಾಷ್ಟ್ರಗಳಿಗೆ ತೆರಳಿದ್ದಾರೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ. ಕೊರೋನಾ ಸಂದರ್ಭ ಯುಎಇ‌ಯಿಂದ 3.30 ಲಕ್ಷ, ಸೌದಿ ಅರೇಬಿಯಾದಿಂದ 1.37 ಲಕ್ಷ, ಕುವೈತ್ ನಿಂದ 97 ಸಾವಿರ, ಒಮಾನ್ ನಿಂದ 72 ಸಾವಿರ ಮಂದಿ ಭಾರತಕ್ಕೆ ಹಿಂತಿರುಗಿದ್ದರು. ಹೀಗಾಗಿದ್ದರೂ‌, ಕೊರೋನಾ‌ ಸಂಖ್ಯೆ ಹಿಡಿಕೆಯ ನಂತರ ಬಹಳಷ್ಟು ಮಂದಿ ಮತ್ತೆ ಕೊಲ್ಲಿ ರಾಷ್ಟ್ರಗಳಿಗೆ ಮರಳಿದ್ದಾರೆ.

ಭಾರತ ಮತ್ತು ಕೊಲ್ಲಿ ರಾಷ್ಟ್ರಗಳ ನಡುವೆ ಏರ್ ಬಬ್ಬಲ್ಸ್ ವ್ಯವಸ್ಥೆಯ ಅಡಿಯಲ್ಲಿ ವಿಮಾನ ಹಾರಾಟಕ್ಕೆ ಅನುಕೂಲ ಕಲ್ಪಿಸಿದ್ದ ರಿಂದ ಇದು ಸಾಧ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ.

ಹೀಗೆ ಕೊಲ್ಲಿ ರಾಷ್ಟ್ರಗಳಿಗೆ ವಾಪಸ್ ಹೋಗಲು ಬಯಸುವ ಕಾರ್ಮಿಕರಿಗೆ ಅಗತ್ಯವನ್ನು ಮತ್ತು ಬೆಂಬಲವನ್ನು ಸರ್ಕಾರ ಮುಂದುವರಿಸಿದೆ. ಯುಎಇ ನಲ್ಲಿರುವ ಭಾರತೀಯ ಕಾರ್ಮಿಕರ ಕೌಶಲ್ಯ ಅಭಿವೃದ್ಧಿ ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಲ್ಲಿ ದೇಶಗಳಿಗೆ 13 ಸಲ ಭೇಟಿ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

L.B. Colleges ಸಾಗರದ ಎಲ್ .ಬಿ‌.ಕಾಲೇಜಿನ ಮುಖ್ಯದ್ವಾರಕ್ಕೆ ಶಿಲಾನ್ಯಾಸ.

L.B. Colleges ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನ ನೆಡೆಸುತ್ತಿರುವ ಲಾಲ್ ಬಹದ್ದೂರ್ ಕಲಾ,...

Shimoga News ಮಕ್ಕಳು ಉತ್ಸಾಹದ ಚಿಲುಮೆಗಳು.ಉತ್ತಮ ಊಟ ಆಟ ಪಾಠದೊಂದಿಗೆ ಸಮಾಜದ ಅಭಿವೃದ್ಧಿ- ನ್ಯಾ.ಎಂ.ಎಸ್.ಸಂತೋಷ್

Shimoga News ಮಕ್ಕಳು ಉತ್ಸಾಹದ ಚಿಲುಮೆಗಳಾಗಿದ್ದು, ಉತ್ತಮ ಊಟ-ಆಟ-ಪಾಠದೊಂದಿಗೆ ಪ್ರಗತಿ ಹೊಂದಿ...

YADAV School Of Chess ಆನ್ ಲೈನ್ ಮೂಲಕಹಿಂದುಳಿದ & ಬಡಮಕ್ಕಳಿಗೆಒಂದು ತಿಂಗಳ ಚೆಸ್ ಕ್ರೀಡಾ ತರಬೇತಿ

YADAV School Of Chess ರಾಜೇಂದ್ರ ನಗರದಲ್ಲಿರುವ ಪ್ರತಿಷ್ಠಿತ ಯಾದವ ಸ್ಕೂಲ್...

Vallabhbhai Patel ಭ್ರಷ್ಟಾಚಾರವು ದೇಶದ ಆಂತರಿಕ ಶತ್ರು.- ಡಾ.ಹೆಚ್.ಬಿ.ಮಂಜುನಾಥ್

ಮಹಾತ್ಮ ಗಾಂಧಿ, ಸರ್ದಾರ್ ಪಟೇಲ್ ಸ್ಮರಣೆಯಲ್ಲಿ ಹಿರಿಯ ಪತ್ರಕರ್ತ ಡಾ ಎಚ್...