Wednesday, January 21, 2026
Wednesday, January 21, 2026

ಕೋವಿಡ್ ಸೋಂಕು ತಗ್ಗಿದಂತೆ ಕೊಲ್ಲಿ ದೇಶಗಳಿಗೆ ಕಾರ್ಮಿಕರ ಪ್ರಯಾಣ

Date:

ಕೊರೋನಾ ಬಿಕ್ಕಟ್ಟಿನ ಸಂದರ್ಭ 6 ಕೊಲ್ಲಿ ರಾಷ್ಟ್ರಗಳಿಂದ ಏನು ಲಕ್ಷ ಮಂದಿ ಭಾರತೀಯ ಕಾರ್ಮಿಕರು ತವರಿಗೆ ಮರಳಿದ್ದಾರೆ.

ಒಂದೇ ಭಾರತ ಅಭಿಯಾನದ ಅಡಿಯಲ್ಲಿ ಕಾರ್ಮಿಕರು ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ.

ಹೀಗೆ ಬಂದವರಲ್ಲಿ ಹಲವಾರು ಮಂದಿ ಕೋವಿಡ್ ಸಂಖ್ಯೆ ಇಳಿಕೆಯಾಗಿರುವ ಹಿನ್ನಲೆಯಲ್ಲಿ ಮತ್ತೆ ಕೊಲ್ಲಿ ರಾಷ್ಟ್ರಗಳಿಗೆ ತೆರಳಿದ್ದಾರೆ ಎಂದು ಜೈಶಂಕರ್ ಅವರು ತಿಳಿಸಿದ್ದಾರೆ. ಕೊರೋನಾ ಸಂದರ್ಭ ಯುಎಇ‌ಯಿಂದ 3.30 ಲಕ್ಷ, ಸೌದಿ ಅರೇಬಿಯಾದಿಂದ 1.37 ಲಕ್ಷ, ಕುವೈತ್ ನಿಂದ 97 ಸಾವಿರ, ಒಮಾನ್ ನಿಂದ 72 ಸಾವಿರ ಮಂದಿ ಭಾರತಕ್ಕೆ ಹಿಂತಿರುಗಿದ್ದರು. ಹೀಗಾಗಿದ್ದರೂ‌, ಕೊರೋನಾ‌ ಸಂಖ್ಯೆ ಹಿಡಿಕೆಯ ನಂತರ ಬಹಳಷ್ಟು ಮಂದಿ ಮತ್ತೆ ಕೊಲ್ಲಿ ರಾಷ್ಟ್ರಗಳಿಗೆ ಮರಳಿದ್ದಾರೆ.

ಭಾರತ ಮತ್ತು ಕೊಲ್ಲಿ ರಾಷ್ಟ್ರಗಳ ನಡುವೆ ಏರ್ ಬಬ್ಬಲ್ಸ್ ವ್ಯವಸ್ಥೆಯ ಅಡಿಯಲ್ಲಿ ವಿಮಾನ ಹಾರಾಟಕ್ಕೆ ಅನುಕೂಲ ಕಲ್ಪಿಸಿದ್ದ ರಿಂದ ಇದು ಸಾಧ್ಯವಾಗಿದೆ ಎಂದು ಅವರು ವಿವರಿಸಿದ್ದಾರೆ.

ಹೀಗೆ ಕೊಲ್ಲಿ ರಾಷ್ಟ್ರಗಳಿಗೆ ವಾಪಸ್ ಹೋಗಲು ಬಯಸುವ ಕಾರ್ಮಿಕರಿಗೆ ಅಗತ್ಯವನ್ನು ಮತ್ತು ಬೆಂಬಲವನ್ನು ಸರ್ಕಾರ ಮುಂದುವರಿಸಿದೆ. ಯುಎಇ ನಲ್ಲಿರುವ ಭಾರತೀಯ ಕಾರ್ಮಿಕರ ಕೌಶಲ್ಯ ಅಭಿವೃದ್ಧಿ ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕೊಲ್ಲಿ ದೇಶಗಳಿಗೆ 13 ಸಲ ಭೇಟಿ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...