- ಸಾಗರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಣೆಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿಧ್ಯಾರ್ಥಿಗಳ ಹಿತದೃಷ್ಠಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಾಗರ ತಾಲ್ಲೂಕಿನಾದ್ಯಂತ ದಿನಾಂಕ: 08-07-2026 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಹಿತ ಪದವಿಪೂರ್ವ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿದೆ. ಸದರಿ ರಜಾ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ… Read more: ಸಾಗರ ತಾಲ್ಲೂಕಿನ ಎಲ್ಲಾ ಶಾಲೆ, ಕಾಲೇಜುಗಳಿಗೆ ಜುಲೈ 8 ರಂದು ರಜೆ ಘೋಷಣೆ
- Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ- ಕೆ.ಗಂಗಪ್ಪಗೌಡBharat Scouts and Guides ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾನವೀಯ ಸೇವೆಗಳ ಮೂಲಕ ವಿಶ್ವದ 216 ದೇಶಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ವಿಸ್ತರಿಸಿಕೊಂಡಿದ್ದು, ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಕಾರ್ಯದರ್ಶಿ ಕೆ. ಗಂಗಪ್ಪ ಗೌಡ ಹೇಳಿದರು. ಶಿವಮೊಗ್ಗ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಆಯೋಜಿಸಿದ್ದ ಜಿಲ್ಲಾಮಟ್ಟದ ಶಿಕ್ಷಣಾಧಿಕಾರಿಗಳು, ದೈಹಿಕ ಶಿಕ್ಷಣ ಪರಿವೀಕ್ಷಕರು,… Read more: Bharat Scouts and Guides ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ನಿರ್ಮಾಣಕ್ಕೆ ವಿಶೇಷ ಒತ್ತು ನೀಡುತ್ತಿದೆ- ಕೆ.ಗಂಗಪ್ಪಗೌಡ
- ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನಭದ್ರಾವತಿ ನಗರದ ಭೋವಿ ಕಾಲೊನಿಯ ನಿವಾಸಿ ಅಶೋಕ ಆತ್ಮಹತ್ಯೆಗೆ ಯತ್ನಿಸಿದ್ದು, ಅದಕ್ಕೂ ಮುನ್ನ ಮಾಡಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊದಲ್ಲಿ ಪಾಪಣ್ಣ, ಕುಳ್ಳಿ ರಾಜೇಶ್, ಅಣ್ಣಪ್ಪ ಹಾಗೂ ಧೃವ ಎಂಬವರ ಹೆಸರನ್ನು ಉಲ್ಲೇಖಿಸಿರುವ ಅಶೋಕ, ಇಸ್ಪೀಟು ಆಡಲು ದುಬಾರಿ ಬಡ್ಡಿಗೆ ಹಣ ನೀಡಿಸಿ, ಬಳಿಕ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಾಲ ಹಾಗೂ ಬಡ್ಡಿ ಹಣವನ್ನು ಕೂಡಲೇ ವಾಪಸ್ ನೀಡುವಂತೆ ಒತ್ತಡ ಹೇರಿ, ಹಣ ಕೊಡದಿದ್ದರೆ ಮನೆಗೆ ಬಂದು ಹಲ್ಲೆ ಮಾಡುವುದಾಗಿ ಬೆದರಿಕೆ… Read more: ಇಸ್ಪೀಟು- ಬಡ್ಡಿ ಮಾಫಿಯಾಗೆ ಬೇಸತ್ತ ಯುವಕ ಆತ್ಮಹತ್ಯೆಗೆ ಯತ್ನ
- ಜುಲೈ 10. ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯದ ಸನ್ನದುಗಳ ವಿದ್ಯುನ್ಮಾನ ಮೂಲಕ ಇ- ಹರಾಜು ಪ್ರಕ್ರಿಯೆಕರ್ನಾಟಕ ಸರ್ಕಾರದ ಅಧಿಸೂಚನೆ ಅನ್ವಯ ಅಬಕಾರಿ ಇಲಾಖೆಯ ಖಾಲಿ ಅಥವಾ ಲಭ್ಯವಿರುವ ಮದ್ಯದ ಸನ್ನದುಗಳನ್ನು (ಸಿಎಲ್-2ಎ ಚಿಲ್ಲರೆ ಮದ್ಯ ಮಾರಾಟ ಮತ್ತು ಸಿಎಲ್-9ಎ ರಿಫ್ರೆಶ್ಮೆಂಟ್ ರೂಂ ಬಾರ್) ಎಲೆಕ್ಟ್ರಾನಿಕ್ ಹರಾಜಿನ ಮೂಲಕ ಇ-ಹರಾಜು ಮಾಡಲು ಸರ್ಕಾರ ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಹರಾಜಾಗಲಿರುವ ಸನ್ನದುಗಳ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂಭಾವ್ಯ ಬಿಡ್ಡುದಾರರಿಗೆ ಜುಲೈ 10 ರಂದು ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಅಬಕಾರಿ ಡೆಪ್ಯೂಟಿ ಕಮಿಷನರ್ ತಿಳಿಸಿದ್ದಾರೆ. 15 ಮದ್ಯದ ಸನ್ನದುಗಳ ಹಂಚಿಕೆ… Read more: ಜುಲೈ 10. ಶಿವಮೊಗ್ಗ ಜಿಲ್ಲೆಯಲ್ಲಿ ಮದ್ಯದ ಸನ್ನದುಗಳ ವಿದ್ಯುನ್ಮಾನ ಮೂಲಕ ಇ- ಹರಾಜು ಪ್ರಕ್ರಿಯೆ
- ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನಶಿವಮೊಗ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉತ್ತೇಜನ ನೀಡಲು ಹಾಗೂ ಈ ಸೌಲಭ್ಯವನ್ನು ಎಲ್ಲರೂ ಪಡೆದುಕೊಳ್ಳುವಂತಾಗಲು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್ ಎಸ್ ಪಿ)ದ ಮೂಲಕ ಆನ್ಲೈನ್ ಅರ್ಜಿ ಆಹ್ವಾನಿಸಿದೆ.ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ: 08182-200266 ಮತ್ತು ಶಿವಮೊಗ್ಗ ಜಿಲ್ಲೆಯ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ಶಿವಮೊಗ್ಗ/ ಸಾಗರ/ ಸೊರಬ/ ಶಿಕಾರಿಪುರ/ ಭದ್ರಾವತಿ/… Read more: ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ
- ಸಾಗರದ ಕಾಗೋಡಿನಿಂದ ವ್ಯಕ್ತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಟಾಣೆ ಪ್ರಕಟಣೆಸಾಗರ ತಾಲ್ಲೂಕಿನ ಕಾಗೋಡು ಗ್ರಾಮ ವಾಸಿ ರೇಣುಕಮ್ಮ ಎಂಬುವವರ ಮಗ 40 ವರ್ಷ ವಯಸ್ಸಿನ ಗಿರೀಶ್ 2 ತಿಂಗಳಿಂದ ಕಾಣೆಯಾಗಿರುತ್ತಾರೆ. ಈತನು ಮಾನಸಿಕ ಅಸ್ವಸ್ಥನಾಗಿದ್ದು, 5.8 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಎಡಗೈ ಮೇಲೆ ದಿವ್ಯ ಎಂಬ ಹಚ್ಚೆ ಇರುತ್ತದೆ.ಈ ಕಾಣೆಯಾದ ವ್ಯಕ್ತಿಯ ಬಗ್ಗೆ ಯಾರಿಗಾದರೂ ಸುಳಿವು ಇದ್ದಲ್ಲಿ ಸಾಗರ ಗ್ರಾಮಾಂತರ ಪೊಲೀಸ್ ಠಾಣೆ 9480803361/ 9480803385, ಸಾಗರ ವಿಭಾಗ -08182-226082, ಶಿವಮೊಗ್ಗ ಎಸ್.ಪಿ ಕಚೇರಿ 08182-261400 ಗಳನ್ನು ಸಂಪರ್ಕಿಸಿ… Read more: ಸಾಗರದ ಕಾಗೋಡಿನಿಂದ ವ್ಯಕ್ತಿ ನಾಪತ್ತೆ. ಸಾಗರ ಗ್ರಾಮಾಂತರ ಪೊಲೀಸ್ ಟಾಣೆ ಪ್ರಕಟಣೆ
- ಪದ್ಮಪ್ರಶಸ್ತಿ- 2027 ನಾಮನಿರ್ದೇಶಕ್ಕೆ ಅರ್ಜಿ ಆಹ್ವಾನಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ‘ಪದ್ಮ ಪ್ರಶಸ್ತಿ-2027’ ಕ್ಕಾಗಿ ಅರ್ಹ ಸಾಧಕರಿಂದ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಸಮಾಜದಲ್ಲಿ ಗಮನಾರ್ಹ ಪರಿಣಾಮ ಬೀರಿದರೂ, ಗುರುತಿಸಲ್ಪಡದೆ ಉಳಿದಿರುವ ಸಾಧಕರನ್ನು ಗುರುತಿಸಿ ಗೌರವಿಸುವುದು ಈ ಪ್ರಶಸ್ತಿಯ ಮುಖ್ಯ ಉದ್ದೇಶವಾಗಿದೆ.ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಕೊಡುಗೆ ನೀಡಿದ ಮಹಿಳಾ ಸಾಧಕಿಯರು ಮತ್ತು ಸಮಾಜ ಸೇವಕರುತಳಮಟ್ಟದ ಕಾರ್ಯಕರ್ತರು ಗ್ರಾಮೀಣ ಮತ್ತು ಬುಡಕಟ್ಟು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಗಳುಮಹಿಳೆಯರ ಮತ್ತು ಮಕ್ಕಳ ಕಲ್ಯಾಣ, ಪೋಷಣೆ ಹಾಗೂ ಮಹಿಳೆಯರ ವಿರುದ್ಧದ ಅಪರಾಧಗಳ ತಡೆಗಟ್ಟುವಿಕೆಗೆ ಶ್ರಮಿಸಿದವರುಮಕ್ಕಳ ರಕ್ಷಣೆ,… Read more: ಪದ್ಮಪ್ರಶಸ್ತಿ- 2027 ನಾಮನಿರ್ದೇಶಕ್ಕೆ ಅರ್ಜಿ ಆಹ್ವಾನ
- S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆS.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಮನೆ ಕುಸಿದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ, ಕಂದಾಯ ಇಲಾಖೆಯ ಅಧಿಕಾರಿಗಳ ತಂಡದೊಂದಿಗೆ ಸ್ಥಳಕ್ಕೆ ಶಾಸಕ ಎಸ್.ಎನ್ಚನ್ನಬಸಪ್ಪ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಹಾಗೂ ಸಾರ್ವಜನಿಕರಿಗೆ ಆಗಿರುವ ತೊಂದರೆಗಳ ಕುರಿತು ಸ್ಥಳೀಯ ನಿವಾಸಿಗಳಿಂದ ಮುಕ್ತವಾಗಿ ಮಾಹಿತಿ ಪಡೆದರು. ಮಳೆಯಿಂದ ನೊಂದ ಕುಟುಂಬಕ್ಕೆ ತಕ್ಷಣದ ತುರ್ತು ಪರಿಹಾರ ವಿತರಿಸಲು… Read more: S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ
- ಶಿವಮೊಗ್ಗದಂತಹ ಮಲೆನಾಡಿನ ಸೌಂದರ್ಯವನ್ನ ಆಸ್ವಾದಿಸುವುದೇ ಆನಂದ- ಮೊಹ್ಮದ್ ಹ್ಯಾರಿಸ್ ನಲಪಾಡ್ಆರೋಗ್ಯ, ಪರಿಸರ ರಕ್ಷಣೆ, ಕ್ರೀಡಾ ಸಂಸ್ಕೃತಿ ಹಾಗೂ ವಿಶೇಷ ಚೇತನರ ಸಬಲೀಕರಣದ ಸಂದೇಶ ಸಾರುವ ಉದ್ದೇಶದೊಂದಿಗೆ ಯುವ ನಾಯಕ ಡಾ. ಶರತ್ ಮರಿಯಪ್ಪ ನೇತೃತ್ವದ “ಡಾ. ಶರತ್ ಮರಿಯಪ್ಪ ಫೌಂಡೇಷನ್’ ವತಿಯಿಂದ ಇಂದು( ಜು.5) ನಗರದಲ್ಲಿ ಆಯೋಜಿಸಿದ್ದ ‘ರನ್ ಮಲೆನಾಡು’ ಮ್ಯಾರಥಾನ್ ಅಭೂತ ಪೂರ್ವ ಯಶಸ್ಸು ಕಂಡಿತು. ಜಿಟಿ ಜಿಟಿ ಮಳೆಯಲ್ಲೂ ರನ್ ಮಲೆನಾಡು ಓಟಕ್ಕೆ ಭಾರೀ ಸಂಖ್ಯೆಯ ಜನರು ಭಾಗವಹಿಸಿದ್ದರು. ವಿಶೇಷವಾಗಿ ಮಕ್ಕಳು, ವಿಶೇಷ ಚೇತನರು, ಹಿರಿಯರು, ದಂಪತಿಗಳು ಕೂಡ ಸುರಿಯುವ ಮಳೆಯನ್ನು ಲೆಕ್ಕಿಸದೆ “ರನ್… Read more: ಶಿವಮೊಗ್ಗದಂತಹ ಮಲೆನಾಡಿನ ಸೌಂದರ್ಯವನ್ನ ಆಸ್ವಾದಿಸುವುದೇ ಆನಂದ- ಮೊಹ್ಮದ್ ಹ್ಯಾರಿಸ್ ನಲಪಾಡ್
- ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ಅವರ ವಿವರಗಳ ಖಚಿತತೆ ದಾಖಲಿಸುವುದು ಮುಖ್ಯ ಉದ್ದೇಶ- ನವೀನ್ ಅಹ್ಮದ್ ಪರ್ವೇಶಿವಮೊಗ್ಗ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆಯಲ್ಲಿ ಇತ್ತೀಚೆಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡಿದ್ದ ಸ್ವೀಪ್ ಕಾರ್ಯಕ್ರಮದ ರಾಜ್ಯ ಮಟ್ಟದ ತರಬೇತುದಾರರಾದ ನವೀದ್ ಅಹಮದ್ ಪರ್ವೇಜ್ ಅವರು ಮತದಾರರ ಪಟ್ಟಿ ಪರಿಷ್ಕರಣೆಯ ಕುರಿತು ಸಮಗ್ರ ಮಾಹಿತಿ ನೀಡಿದರು. ಅರ್ಹರೆಲ್ಲರಿಗೂ ಮತದಾನದ ಹಕ್ಕು ನೀಡುವುದು ಅಭಿಯಾನದ ಉದ್ದೇಶಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯು 2026ರ ಮತದಾರ ಪಟ್ಟಿಯ… Read more: ಪ್ರತಿಯೊಬ್ಬ ಅರ್ಹ ನಾಗರಿಕರ ಮತದಾರರ ಪಟ್ಟಿಗೆ ಸೇರ್ಪಡೆ ಮತ್ತು ಅವರ ವಿವರಗಳ ಖಚಿತತೆ ದಾಖಲಿಸುವುದು ಮುಖ್ಯ ಉದ್ದೇಶ- ನವೀನ್ ಅಹ್ಮದ್ ಪರ್ವೇ
Book Your Advertisement Now in Shimoga News.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd in Shimoga News ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.
