ರಾಜ್ಯ ಸರ್ಕಾರ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಫೆ. 14ರ ಸೋಮವಾರದಂದು ವಿಧಾನಸೌಧ ಮುತ್ತಿಗೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಿರ್ಧರಿಸಿದೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್ ಆರ್ ಬಸವರಾಜಪ್ಪ ಅವರು ಶಿವಮೊಗ್ಗದ ಪತ್ರಿಕ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
13 ತಿಂಗಳ ರೈತರ ನಿರಂತರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದ್ದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆದಿದೆ. ಈ ಕಾಯ್ದೆಗಳಿಗೆ ಪೂರಕವಾಗಿ ರಾಜ್ಯ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಾಗಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಬೆಳಗಾವಿ ವಿಧಾನ ಸಭಾ ಅಧಿವೇಶನದಲ್ಲಿ ತಿಳಿಸಿದ್ದರು. ಆದರೆ ಈ ಕಾಯ್ದೆಯನ್ನು ವಾಪಸ್ ಪಡೆದಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆಯನ್ನು ಮುಂದುವರಿಸಿದೆ. ಭತ್ತ, ಜೋಳ, ರಾಗಿ, ತೊಗರಿ ಖರೀದಿ ಕೇಂದ್ರಗಳನ್ನು ಮುಚ್ಚಿ ರೈತರು ಅರ್ಧ ಬೆಲೆಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಈ ಹಿಂದೆ ರಾಷ್ಟ್ರೀಯ ವಿಪತ್ತಿನ ಪರಿಹಾರದ ಅಡಿಯಲ್ಲಿ ಕೊಡಬೇಕಾಗಿದ್ದ ನಷ್ಟದ ಹಣವನ್ನು ಇನ್ನೂ ರೈತರಿಗೆ ಕೊಟ್ಟಿಲ್ಲ. ರೈತರಿಗೆ ಬಗರ್ಹುಕುಂ ಸಾಗುವಳಿ ಪತ್ರವನ್ನು ಸಹ ರೈತರಿಗೆ ಕೊಟ್ಟಿಲ್ಲ ಎಂದು ಹೆಚ್.ಆರ್.ಬಸವರಾಜಪ್ಪ ಹೇಳಿದರು.
ಕೇಂದ್ರ ಸರ್ಕಾರ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ, ಕೃಷಿ, ಗ್ರಾಮೀಣ ಉದ್ಯೋಗ ಭರವಸೆ ಯೋಜನೆ, ರಸಗೊಬ್ಬರ ಸಬ್ಸಿಡಿ, ನೀರಾವರಿ ಗ್ರಾಮೀಣಾಭಿವೃದ್ಧಿಗೆ ಹೋದವರ್ಷದ ಬಜೆಟ್ಗಿಂತ ಈ ವರ್ಷ ಕಡಿಮೆ ಮೊತ್ತವನ್ನು ಮೀಸಲಿಟ್ಟಿದೆ. ಅಲ್ಲದೇ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಗೋದಾವರಿ, ಪೆನ್ನಾರ್ ನೀರಾವರಿ ಯೋಜನೆಯಿಂದ ಅಕ್ಕಪಕ್ಕದ ರಾಜ್ಯಗಳಿಗೆ ಲಾಭವಾಗುತ್ತಿದೆ ಹೊರತು, ಕರ್ನಾಟಕ ರಾಜ್ಯಕ್ಕೆ ಇದರಿಂದ ಯಾವುದೇ ಲಾಭವಿಲ್ಲ ಎಂದು ಹೆಚ್.ಆರ್.ಬಸವರಾಜಪ್ಪ ಅವರು ತಿಳಿಸಿದರು.
ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೆ ಅಂತರರಾಜ್ಯ ನದಿ ವಿವಾದಗಳು ಬಗೆಹರಿಯದೆ ಇನ್ನೂ ಹಾಗೆ ಉಳಿದಿದೆ. ಹೀಗಿರುವಾಗ ನದಿಜೋಡಣೆ ಸಾಧ್ಯವಾಗದ ಮಾತು. ಈ ರೀತಿಯ ದೀರ್ಘಕಾಲಿಕ ಯೋಜನೆ ಬದಲಿಗೆ ನದಿಜೋಡಣೆಯ ಖರ್ಚು ಮಾಡುವ ಹಣವನ್ನು ಕೆರೆಕಟ್ಟೆಗಳ ಹೂಳು ತೆಗೆಸಲು, ಮಳೆ ನೀರು ಕೊಯ್ಲು ಮಾಡುವುದು ಇನ್ನು ಮುಂತಾದ ಅಂತರ್ಜಲ ರಕ್ಷಣೆ ಮಾಡಬೇಕು.ಇತಂಹ ಕಾರ್ಯಗಳನ್ನು ರೂಪಿಸಿ ಸಣ್ಣ ನೀರಾವರಿ ಯೋಜನೆಗಳಿಗೆ ಒತ್ತು ಕೊಡುವ ನಿಟ್ಟಿನಲ್ಲಿ ಸೋಲಾರ್, ಹನಿ ಮತ್ತು ತುಂತುರು ನೀರಾವರಿಗೆ ಶೇ100 ರಷ್ಟು ಸಹಾಯಧನ ಒದಗಿಸುವ ಮುಖಾಂತರ ತಕ್ಷಣ ರೈತರಿಗೆ ನೀರಾವರಿ ಅನುಕೂಲ ಮಾಡಿಕೊಡಬಹುದಾಗಿದೆ ಎಂದು ಹೆಚ್.ಆರ್.ಬಸವರಾಜಪ್ಪ ಅವರು ಹೇಳಿದರು.
ಭೂ ಕಬಳಿಕೆ ಕಾನೂನು ಅಡಿ ರೈತರ ಮೇಲೆ ನ್ಯಾಯಾಲಯದಲ್ಲಿ ಕೇಸು ದಾಖಲಿಸಿ ರೈತರು ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಆದ್ದರಿಂದ ರೈತರ ಮೇಲಿರುವ ಎಲ್ಲಾ ಕೇಸುಗಳನ್ನು ಕೈಬಿಡಬೇಕು ಎಂದು ಈ ವೇಳೆ ಹೆಚ್.ಆರ್.ಬಸವರಾಜಪ್ಪ ಆಗ್ರಹಿಸಿದರು.
ಈ ಎಲ್ಲಾ ಬೇಡಿಕೆಗಳ ಈಡೇರಿಕೆಗಾಗಿ ಫೆಬ್ರವರಿ 14ರ ಸೋಮವಾರ ಬೆಳಗ್ಗೆ 11ಗಂಟೆಗೆ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಹೊರಟು ವಿಧಾನಸೌಧ ಮುತ್ತಿಗೆ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕು ಎಂದು ಕರೆಕೊಟ್ಟರು.
ಪ್ರಸ್ತುತ ಹಿಜಾಬ್ ವಿವಾದದ ಬಗ್ಗೆ ಮಾತನಾಡಿದ ಅವರು ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ಧರ್ಮದ ವಿಷಯಕ್ಕೆ ಭಾಗಿಯಾಗಬಾರದು. ವಿದ್ಯಾರ್ಥಿಗಳು ವಿದ್ಯಾಭ್ಯಾಸದದ ಕಡೆಗೆ ಗಮನ ಹರಿಸಬೇಕು ಎಂದು ಮನವಿ ಮಾಡಿಕೊಂಡರು.
ಈ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲೂಕು ಅಧ್ಯಕ್ಷ ಸಿ.ಚಂದ್ರಪ್ಪ, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ರಾಘವೇಂದ್ರ, ರಾಜ್ಯ ಉಪಾಧ್ಯಕ್ಷ ಟಿ.ಎಂ. ಚಂದ್ರಪ್ಪ ಅವರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp
Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App
KLIVE Android App on Google Play Store
Download the most loved Klive App for your Android phone or tablet.