Thursday, October 3, 2024
Thursday, October 3, 2024

ಕನ್ನಡದ ಕೆನೆ ಕವಿ ಕಣವಿ ಕಣ್ಮರೆ

Date:

ಚೆನ್ನವೀರ ಕಣವಿ ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ್ ಎಂದೇ ಪ್ರಸಿದ್ದ. ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಇವರು ಒಬ್ಬರಾಗಿದ್ದಾರೆ.

ಚನ್ನವೀರ ಕಣವಿಯವರು ಗದಗ ಜಿಲ್ಲೆಯ ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದರು. ತಂದೆ ಸಕ್ಕರೆಪ್ಪ ಮತ್ತು ತಾಯಿ ಪಾರ್ವತವ್ವ. ತಂದೆ ಸಕ್ಕರೆಪ್ಪ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಧಾರವಾಡದಲ್ಲಿಯೇ ಮಾಧ್ಯಮಿಕ ಹಾಗೂ ಕಾಲೇಜು ಶಿಕ್ಷಣ ಪೂರೈಸಿ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ ಪಡೆದರು.
ಆಗ ತಾನೆ ಆರಂಭವಾಗಿದ್ದ ವಿಶ್ವವಿದ್ಯಾಲಯದ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾದರು.
1956ರ ವೇಳೆಗೆ ಅದೇ ವಿಭಾಗದ ನಿರ್ದೇಶಕರಾಗಿ 1983 ರವರೆಗೆ ಸೇವೆ ಸಲ್ಲಿಸಿದರು. ಅವರ ಪತ್ನಿ ಶಾಂತಾದೇವಿ ಅವರು ಕೂಡ ಸಾಹಿತ್ಯ ಸಂಸ್ಕೃತಿಯ ಒಲವುಳ್ಳ ದೊಡ್ಡ ಮನೆತನದಿಂದ ಬಂದವರು.

ಇವರು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕಾವ್ಯಾಕ್ಷಿ, ಭಾವಜೀವಿ,ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು,ಎರಡು ದಡ,ನಗರದಲ್ಲಿ ನೆರಳು, ಜೀವ ಧ್ವನಿ, ಕಾರ್ತಿಕದ ಮೋಡ, ಜಿನಿಯಾ, ಹೊಂಬೆಳಕು ಇವು ಚೆನ್ನವೀರ ಕಣವಿಯವರ ಪ್ರಮುಖ ಕವನ ಸಂಕಲನಗಳಾಗಿವೆ.
ಕವಿತೆ ಜನತೆಗೆ ತಲುಪುವುದು ಅದಕ್ಕೆ ಎಂದು ಬಯಸುತ್ತಾ ಬಂದ ಕವಿಗಳಲ್ಲಿ ಕಣವಿ ಅವರು ಕೂಡ ಒಬ್ಬರಾಗಿದ್ದಾರೆ. ಕಣವಿಯವರ ಗೀತೆಗಳಲ್ಲಿ ಸಹಜ ಕವಿಯೊಬ್ಬ ಬರೆದಾಗ ಮಾತ್ರ ಕಾಣಿಸಿಕೊಳ್ಳಬಲ್ಲ ಅನೇಕ ಕಾವ್ಯಾತ್ಮಕ ಹೊಳಪುಗಳು ವಿಶೇಷವಾಗಿ ಕಂಡುಬರುತ್ತವೆ. ವಿಶ್ವಭಾರತಿಗೆ ಕನ್ನಡದಾರತಿ, ಮುಂಜಾವದಲ್ಲಿ ಹಸಿರು ಹುಲ್ಲು ಮಕಮಲ್ಲಿನಲಿ, ಹೂವು ಹೊರಳುವುವು ಸೂರ್ಯನ ಕಡೆಗೆ, ಒಂದು ಮುಂಜಾವಿನಲಿ ತುಂತುರಿನ ಸೋನೆ ಮಳೆ ನೀವು ಜನ ಮನೆತನ ಹಾಸುಹೊಕ್ಕಾಗಿರುವ ಕಣವಿ ಅವರ ಪ್ರಮುಖ ಕೃತಿಗಳಾಗಿವೆ.

ಇವರ “ಜೀವಧ್ವನಿ” ಎಂಬ ಕೃತಿಗೆ 1981ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ.
1996ರಲ್ಲಿ ಹಾಸನದಲ್ಲಿ ನಡೆದ ಅರವತ್ತೈದನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಣವಿಯವರು ಅಧ್ಯಕ್ಷರಾಗಿದ್ದರು.
ಆಳ್ವಾಸ್ -ನುಡಿಸಿರಿ 2008 “ರ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಜೀವಧ್ವನಿ ಕವನ ಸಂಗ್ರಹಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ,ಪಂಪ ಪ್ರಶಸ್ತಿ,
ಬಸವ ಗುರು ಕಾರುಣ್ಯ ಪ್ರಶಸ್ತಿ,
ನಾಡೋಜ ಪ್ರಶಸ್ತಿ,
ಕರ್ನಾಟಕ ಕವಿರತ್ನ ಪ್ರಶಸ್ತಿ,

ಅನಕೃ ನಿರ್ಮಾಣ ಪ್ರಶಸ್ತಿ ಸೇರಿದಂತೆ ಹತ್ತು ಹಲವು ಪ್ರಶಸ್ತಿಗಳು ಕಣವಿಯವರ ಸಾಧನೆಗೆ ಸಿಕ್ಕ ಗೌರವಗಳಾಗಿವೆ.
ಇವರಿಗೆ ‘ನಾಡೋಜ ಮತ್ತು ಪಂಪ ಪ್ರಶಸ್ತಿ ಕೂಡ ಸಂದಿವೆ.
2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಲಭಿಸಿದೆ.

ಚೆನ್ನವೀರ ಕಣವಿಯವರು ಫೆಬ್ರುವರಿ 16 2022 ರಂದು ಇಹಲೋಕ ತ್ಯಜಿಸಿದ್ದಾರೆ.

ನಾಡು ಕಂಡಂತಹ ಅತ್ಯಂತ ಸೃಜನಶೀಲ ಸಾಹಿತ್ಯ ರಚನೆಕಾರರು, ಚಂಬೆಳಕಿನ ಕವಿ, ನಾಡೋಜ ಶ್ರೀ ಚೆನ್ನವೀರ ಕಣವಿಯವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿ ತನಾಗಿದ್ದೇನೆ.
ಸಾಹಿತ್ಯದ ಮುಖಾಂತರ ಅವರು ತಮ್ಮ ಕಲ್ಪನೆ ಹಾಗೂ ವಾಸ್ತವಾಂಶವನ್ನು ಪರಿಣಾಮಕಾರಿಯಾಗಿ ಬಿಂಬಿಸಿದ ಕವಿಯಾಗಿದ್ದರು. ಪ್ರಶಸ್ತಿಗಳಿಗೆ ಗೌರವ ಬರುವ ವ್ಯಕ್ತಿತ್ವ ಅವರದಾಗಿತ್ತು.

ಅವರ ನಿಧನದಿಂದ ಕನ್ನಡ ಸಾರಸತ್ವ ಲೋಕಕ್ಕೆ ಬಹುದೊಡ್ಡ ಹಾನಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಖ್ಯಾತ ಕವಿ ಶ್ರೀ ಚನ್ನವೀರ ಕಣವಿರವರು ದಾವಣಗೆರೆಗೆ ಬಂದಾಗ ಅವರ ‘ಕ್ಯಾರಿಕೇಚರನ್ನು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ವ್ಯಂಗ್ಯಚಿತ್ರಕಾರ ಎಚ್.ಬಿ.ಮಂಜುನಾಥ ರವರು ರಚಿಸಿದಾಗ ನೋಡಿ ಮೆಚ್ಚಿದ ಕಣವಿರವರು ಅದಕ್ಕೆ ತಮ್ಮ ಹಸ್ತಾಕ್ಷರ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.


Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...