ಡಾ. ರಾಜೇಶ್ ಅವರು ಏಪ್ರಿಲ್ 15,1935ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಇವರು ಕನ್ನಡ ಹಿರಿಯ ನಟರಲ್ಲಿ ಒಬ್ಬರಾಗಿದ್ದಾರೆ.
ರಾಜ್ ಕುಮಾರ್, ಉದಯ ಕುಮಾರ್, ಕಲ್ಯಾಣ ಕುಮಾರ್ ಅವರ ಸಮಕಾಲೀನರಾಗಿ ಅಂತಹ ಮಹಾನ್ ಪ್ರತಿಭೆಗಳ ಕಾಲದಲ್ಲಿ ಕೂಡಾ ತಮ್ಮದೇ ಆದ ವಿಶಿಷ್ಟ ಛಾಪನ್ನು ಕನ್ನಡ ಚಿತ್ರಂಗದಲ್ಲಿ ಮೂಡಿಸಿದ್ದವರು.
ಮೊದಲಿಗೆ ಇವರು ಪಿ.ಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ನಂತರದ ದಿನಗಳಲ್ಲಿ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಹೀಗಾಗಿ ಮನೆಯವರಿಗೆ ತಿಳಿಯದಂತೆ ಸುದರ್ಶನ್ ನಾಟಕ ಮಂಡಳಿಯನ್ನು ಸೇರಿಕೊಂಡರು.
ಮುಂದೆ ತಮ್ಮದೇ ಆದ ‘ಶಕ್ತಿ ನಾಟಕ ಮಂಡಳಿ’ಯನ್ನು ಸ್ಥಾಪಿಸಿದ ರಾಜೇಶ್ ನಾಡಿನೆಲ್ಲೆಡೆ ಪ್ರಸಿದ್ಧ ನಾಟಕಗಳಲ್ಲಿ ಬಣ್ಣ ಹಚ್ಚಿದರು.
ಕಲಾತಪಸ್ವಿ ರಾಜೇಶ್’ ಎಂಬುದು ಅವರ ಆತ್ಮಚರಿತ್ರೆಯ ಹೆಸರಾಗಿದೆ.
ಇವರು ನಮ್ಮ ಊರು ಚಿತ್ರದ ಮೂಲಕ ನಾಯಕ ನಟನಾಗಿ ಕನ್ನಡ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಚಿತ್ರ ವಿಮರ್ಶಕರು ಕನ್ನಡ ಚಿತ್ರರಂಗಕ್ಕೆ ಒಬ್ಬ ಹೊಸ ನಾಯಕ ನಟ ಸಿಕ್ಕಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಕನ್ನಡ ಚಿತ್ರರಂಗದ ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ಹೀಗೆ ಮುಂತಾದ ಚಿತ್ರಗಳಲ್ಲಿ ರಾಜೇಶ ಅವರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು. ಇತ್ತೀಚೆಗೆ ನಟ ನಿರ್ದೇಶಕ ಶ್ರೀನಿಧಿ ಅವರ ಓಲ್ಡ್ ಮಾಂಕ್ ಚಿತ್ರದಲ್ಲಿಯೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ರಾಜೇಶ್ ಅವರ ಭಾಷಾ ಉಚ್ಚಾರ, ಭಾವಾಭಿನಯ ಉತ್ತಮ ಮಟ್ಟದ್ದಾಗಿದ್ದು ನಿರಂತರವಾಗಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸುತ್ತಾ ಬಂದರು. ‘ಬೆಳುವಲದ ಮಡಿಲಲ್ಲಿ ಬೆವರ ಹನಿ ಬಿದ್ದಾಗ’, ‘ನಾನೇ ಎಂಬ ಭಾವ ನಾಶವಾಯಿತೋ’, ‘ರವಿವರ್ಮನ ಕುಂಚದ ಕಲೆ’, ‘ಈ ದೇಶ ಚೆನ್ನ ಈ ಮಣ್ಣು ಚಿನ್ನ’, ‘ಕಂಗಳು ವಂದನೆ ಹೇಳಿವೆ’ ಮುಂತಾದ ಜನಪ್ರಿಯ ಹಾಡುಗಳಲ್ಲಿಯೂ ಇವರನ್ನು ಕಾಣಬಹುದು.
ರಾಜೇಶ್ ಅವರನ್ನು ಹಲವಾರು ಪ್ರಶಸ್ತಿ ಗೌರವಗಳು ಅರಸಿ ಬಂದಿವೆ. ಧಾರವಾಡ ವಿಶ್ವವಿದ್ಯಾಲಯವು ರಾಜೇಶ್ ಅವರಿಗೆ ಡಾಕ್ಟರೆಟ್ ಪದವಿ ನೀಡಿ ಗೌರವಿಸಿದೆ.
ಇವರು ಇಂದು ಮುಂಜಾನೆ 2:30 ರ ಹೊತ್ತಿಗೆ ವಯೋಸಹಜ ಕಾಯಿಲೆ ಯಿಂದ ಇಹಲೋಕ ತ್ಯಜಿಸಿದ್ದಾರೆ.
ಇವರ ಅಗಲುವಿಕೆಗೆ ಅಪಾರ ಅಭಿಮಾನ ಬಳಗ, ಸಿನಿಮಾ ರಂಗದವರು ಹಾಗೂ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟರಾದ ಶ್ರೀ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟು ಮಾಡಿದೆ.
ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ. ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
Latest News on WhatsApp

Why Keelambi Media Lab Pvt Ltd ?
Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.
KLIVE at Google News App

KLIVE Android App on Google Play Store

Download the most loved Klive App for your Android phone or tablet.