Thursday, May 14, 2026
Thursday, May 14, 2026

ಶಿವಮೊಗ್ಗ ಕೊಲೆ ಪ್ರಕರಣ ಅಪರಾಧಿಗಳನ್ನ ಹೆಡೆಮುರಿ ಕಟ್ಟುತ್ತೇವೆ-ಗೃಹಸಚಿವ

Date:

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಭಾನುವಾರ ರಾತ್ರಿ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ನ ಶವವನ್ನು ನೋಡಿ ಮೃತನ ತಂದೆ ತಾಯಿ ಹಾಗೂ ಸಹೋದರಿಯರೊಂದಿಗೆ ಮಾತನಾಡಿ. ಸಾಂತ್ವನ ಹೇಳಿ. ಅವರಲ್ಲಿ ವಿಶ್ವಾಸ ತುಂಬುವಂತಹ ಕೆಲಸ ಮಾಡಿದ್ದೇನೆ. ಆತನ ಕುಟುಂಬಸ್ಥರು ಮೃತ ಹರ್ಷನ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಆದಷ್ಟು ಬೇಗ ಆರೋಪಿಗಳ ಹೆಡೆಮುರಿ ಕಟ್ಟಲು ಇಲಾಖೆ ಸಜ್ಜಾಗಿದೆ. ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇನೆ. ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವ ಕಾರಣದಿಂದ ಯಾವುದೇ ರೀತಿಯ ಮಾಹಿತಿಯನ್ನು ನಾನು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಗೃಹಸಚಿವರ ಜ್ಞಾನೇಂದ್ರ ಅವರು ತಿಳಿಸಿದರು.

ಸಮಾಧಾನದ ಸಂಗತಿಯೆಂದರೆ ಆರೋಪಿಗಳ ಸುಳಿವು ಪತ್ತೆಯಾಗಿದ್ದು ಆರೋಪಿಗಳನ್ನು ಅತೀ ಶೀಘ್ರದಲ್ಲೇ ಬಂಧಿಸಲಾಗುವುದು. ಈ ಕೃತ್ಯದಲ್ಲಿ ನಾಲ್ಕರಿಂದ ಐದು ಜನ ಅಪರಾಧಿಗಳ ಕೈವಾಡವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇನ್ನೂ ಖಚಿತ ಪಡಿಸಬೇಕಾಗಿದೆ. ಶಿವಮೊಗ್ಗ ನಗರದಲ್ಲಿ ರೀತಿಯ ಕೃತ್ಯ ನಡೆದಿರುವುದು ಅತ್ಯಂತ ದುರದೃಷ್ಟಕರ ಇದನ್ನು ನಾನು ಖಂಡಿಸುತ್ತೇನೆ ಹಾಗೂ ಈ ಪ್ರಕರಣದಲ್ಲಿ ನಾವು ಒಂದು ಸ್ಪಷ್ಟವಾದ ಸಂದೇಶವನ್ನು ಕೊಡುತ್ತೇವೆ. ಈರೀತಿಯ ವಿಕೃತ ಭಾವನೆಯಿಂದ ಏನು ಬೇಕಾದರೂ ಮಾಡಿ ಬಚಾವ್ ಆಗಬಹುದು ಎಂಬುದು ಇನ್ನೂ ಮುಂದೆ ಆಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...