Monday, August 24, 2026
Monday, August 24, 2026

ಶಿವಮೊಗ್ಗ ಕೊಲೆ ಪ್ರಕರಣ ಅಪರಾಧಿಗಳನ್ನ ಹೆಡೆಮುರಿ ಕಟ್ಟುತ್ತೇವೆ-ಗೃಹಸಚಿವ

Date:

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಭಾನುವಾರ ರಾತ್ರಿ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ನ ಶವವನ್ನು ನೋಡಿ ಮೃತನ ತಂದೆ ತಾಯಿ ಹಾಗೂ ಸಹೋದರಿಯರೊಂದಿಗೆ ಮಾತನಾಡಿ. ಸಾಂತ್ವನ ಹೇಳಿ. ಅವರಲ್ಲಿ ವಿಶ್ವಾಸ ತುಂಬುವಂತಹ ಕೆಲಸ ಮಾಡಿದ್ದೇನೆ. ಆತನ ಕುಟುಂಬಸ್ಥರು ಮೃತ ಹರ್ಷನ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಆದಷ್ಟು ಬೇಗ ಆರೋಪಿಗಳ ಹೆಡೆಮುರಿ ಕಟ್ಟಲು ಇಲಾಖೆ ಸಜ್ಜಾಗಿದೆ. ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇನೆ. ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವ ಕಾರಣದಿಂದ ಯಾವುದೇ ರೀತಿಯ ಮಾಹಿತಿಯನ್ನು ನಾನು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಗೃಹಸಚಿವರ ಜ್ಞಾನೇಂದ್ರ ಅವರು ತಿಳಿಸಿದರು.

ಸಮಾಧಾನದ ಸಂಗತಿಯೆಂದರೆ ಆರೋಪಿಗಳ ಸುಳಿವು ಪತ್ತೆಯಾಗಿದ್ದು ಆರೋಪಿಗಳನ್ನು ಅತೀ ಶೀಘ್ರದಲ್ಲೇ ಬಂಧಿಸಲಾಗುವುದು. ಈ ಕೃತ್ಯದಲ್ಲಿ ನಾಲ್ಕರಿಂದ ಐದು ಜನ ಅಪರಾಧಿಗಳ ಕೈವಾಡವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇನ್ನೂ ಖಚಿತ ಪಡಿಸಬೇಕಾಗಿದೆ. ಶಿವಮೊಗ್ಗ ನಗರದಲ್ಲಿ ರೀತಿಯ ಕೃತ್ಯ ನಡೆದಿರುವುದು ಅತ್ಯಂತ ದುರದೃಷ್ಟಕರ ಇದನ್ನು ನಾನು ಖಂಡಿಸುತ್ತೇನೆ ಹಾಗೂ ಈ ಪ್ರಕರಣದಲ್ಲಿ ನಾವು ಒಂದು ಸ್ಪಷ್ಟವಾದ ಸಂದೇಶವನ್ನು ಕೊಡುತ್ತೇವೆ. ಈರೀತಿಯ ವಿಕೃತ ಭಾವನೆಯಿಂದ ಏನು ಬೇಕಾದರೂ ಮಾಡಿ ಬಚಾವ್ ಆಗಬಹುದು ಎಂಬುದು ಇನ್ನೂ ಮುಂದೆ ಆಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...